ಮಡಿಕೇರಿ, ಜು. 24: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಮಡಿಕೇರಿ ಹಾಗೂ ಸಹಕಾರ ಇಲಾಖೆ ಕೊಡಗು ಜಿಲ್ಲೆ ಮಡಿಕೇರಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ಚುನಾವಣೆ ಇರುವ ಸಹಕಾರ ಸಂಘಗಳ ರಿಟರ್ನಿಂಗ್ ಅಧಿಕಾರಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸಹಕಾರಿ ಚುನಾವಣೆ ಕುರಿತಾದ ಶಿಕ್ಷಣ ಕಾರ್ಯಕ್ರಮ ತಾ. 25 ರಂದು (ಇಂದು) ಬೆಳಿಗ್ಗೆ 10.30 ಗಂಟೆಗೆ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ನಿರ್ದೇಶಕರು ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು ಹಾಗೂ ಅಧ್ಯಕ್ಷರು ಕೊಡಗು ಜಿಲ್ಲಾ ಸಹಕಾರ ಯೂನಿಯನ್‍ನ ಎ.ಕೆ. ಮನು ಮುತ್ತಪ್ಪ ನೆರವೇರಿಸಲಿದ್ದು, ಅತಿಥಿ ಉಪನ್ಯಾಸಕರಾಗಿ ಬೆಂಗಳೂರಿನ ನಿವೃತ್ತ ಸಹಕಾರ ಸಂಘಗಳ ಉಪನಿಬಂಧಕ ವಿ. ನಟರಾಜನ್ ಹಾಗೂ ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಮಡಿಕೇರಿಯ ಉಪಾಧ್ಯಕ್ಷ ಪಿ.ಸಿ. ಅಚ್ಚಯ್ಯ ಮತ್ತು ನಿರ್ದೇಶಕರು ಪಾಲ್ಗೊಳ್ಳಲಿದ್ದಾರೆ.