ಕುಶಾಲನಗರ, ಜು. 26: ಗುರು ಪೂರ್ಣಿಮೆ ಅಂಗವಾಗಿ ಕಾವೇರಿ ನದಿಗೆ 83ನೇ ಮಹಾ ಆರತಿ ಕಾರ್ಯಕ್ರಮ ತಾ. 27 ರಂದು (ಇಂದು) ನಡೆಯಲಿದೆ. ಕುಶಾಲನಗರ ಅಯ್ಯಪ್ಪಸ್ವಾಮಿ ದೇವಾಲಯದ ಬಳಿ ಕಾವೇರಿ ನದಿ ತಟದಲ್ಲಿ ಸಂಜೆ 5 ಗಂಟೆಗೆ ಕಾರ್ಯಕ್ರಮ ನಡೆಯುವದು. ಇದೇ ಸಂದರ್ಭ ಕುಶಾಲನಗರ ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಕಳೆದ 40 ವರ್ಷಗಳಿಂದ ಪೌರಕಾರ್ಮಿಕರಾಗಿ ಸೇವೆ ಸಲ್ಲಿಸಿ ಈ ತಿಂಗಳ ಅಂತ್ಯದಲ್ಲಿ ನಿವೃತರಾಗಲಿರುವ ರಂಗಸ್ವಾಮಿ ಅವರನ್ನು ಸನ್ಮಾನಿಸಿ ಗೌರವಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕಾವೇರಿ ನದಿ ಸ್ವಚ್ಛತಾ ಆಂದೋಲನದ ಪ್ರಕಟಣೆ ತಿಳಿಸಿದೆ.