ಕೂಡಿಗೆ, 25: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬ್ಯಾಡಗೊಟ್ಟ ಗ್ರಾಮದಲ್ಲಿ ಜಿಲ್ಲಾಧಿಕಾರಿಯವರು ಸರ್ವೆ ನಂಬರ್ 1/1ರಲ್ಲಿ ಒಂದು ಎಕರೆ ಜಾಗವನ್ನು ರುದ್ರಭೂಮಿಗೆ ನೀಡುವಂತೆ ಅಲ್ಲ್ಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸಾರ್ವಜನಿಕರು ನೀಡಿದ ಅರ್ಜಿ ಪರಿಶೀಲನೆ ಮಾಡಿ ಒಂದು ಎಕರೆ ಜಾಗವನ್ನು ಕೂಡಿಗೆ ಗ್ರಾಮ ಪಂಚಾಯಿತಿಗೆ ನೀಡುವ ಭರವಸೆ ನೀಡಿದರು. ಆದರೆ ಗ್ರಾಮ ಪಂಚಾಯಿತಿಯವರು ಸ್ಥಳವನ್ನು ತಮ್ಮ ಅಧೀನಕ್ಕೆ ತೆಗೆದುಕೊಂಡಿರುವದಿಲ್ಲ. ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾವು ಆದರೆ ಶವಸಂಸ್ಕಾರಕ್ಕೆ ಸ್ಥಳವಿಲ್ಲದೆ ಪರದಾಡುವಂತೆ ಆಗಿದೆ. ಸಂಬಂಧಿಸಿದ ಗ್ರಾಮ ಪಂಚಾಯಿತಿ ಅಧಿಕಾರಿಗಳು ಮತ್ತು ಸದಸ್ಯರು ರುದ್ರಭೂಮಿ ಜಾಗವನ್ನು ಗುರುತಿಸಲು ಮುಂದಾಗಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.