ಕುಶಾಲನಗರ, ಜು. 26: ಕುಶಾಲನಗರದ ಶ್ರೀ ಶಿರಡಿ ಸಾಯಿ ಟ್ರಸ್ಟ್ ಆಶ್ರಯದಲ್ಲಿ ಗುರು ಪೂರ್ಣಿಮ ಅಂಗವಾಗಿ ಶ್ರೀ ಸಾಯಿ ಲೇಔಟ್‍ನಲ್ಲಿರುವ ಶ್ರೀ ಶಿರಡಿ ಸಾಯಿಬಾಬಾ ದೇವಾಲಯದಲ್ಲಿ ತಾ. 27 ರಂದು (ಇಂದು) ಸತ್ಯನಾರಾಯಣ ಪೂಜೆ ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ 9.30ಕ್ಕೆ ಪೂಜಾ ಕಾರ್ಯಕ್ರಮ ಆರಂಭಗೊಳ್ಳಲಿದ್ದು, ಮಧ್ಯಾಹ್ನ 12 ಗಂಟೆಗೆ ಮಹಾ ಮಂಗಳಾರತಿ ಬಳಿಕ ಅನ್ನ ಪ್ರಸಾದ ವಿನಿಯೋಗ ನಡೆಯಲಿದೆ ಎಂದು ಟ್ರಸ್ಟ್ ಆಡಳಿತ ಮಂಡಳಿ ತಿಳಿಸಿದೆ.