ಕುಶಾಲನಗರ, ಜು. 26: ಕೊಡಗು ಜಿಲ್ಲಾ ಮಕ್ಕಳ ಸಾಹಿತ್ಯ ಪರಿಷತ್ತಿನ ವೀರಾಜಪೇಟೆ ತಾಲೂಕಿನ ಅಧ್ಯಕ್ಷರಾಗಿ ಮೈತಾಡಿ ಗ್ರಾಮದ ವಿ.ಪಿ. ಲೋಹಿತ್ ಆಯ್ಕೆಯಾಗಿದ್ದಾರೆ. ಶ್ರೀ ಆದಿ ಚುಂಚನಗಿರಿ ಮಹಾ ಸಂಸ್ಥಾನದ ಆಶ್ರಯದಲ್ಲಿ ಮಕ್ಕಳ ಪ್ರತಿಭೆಯನ್ನು ಗುರುತಿಸಲು ಹಾಗೂ ಸಾಹಿತ್ಯಾಸಕ್ತಿಯನ್ನು ಬೆಳೆಸುವ ಉದ್ದೇಶದಿಂದ ಕರ್ನಾಟಕ ಮಕ್ಕಳ ಸಾಹಿತ್ಯ ಪರಿಷತ್ತು ರಚಿಸಲಾಗಿದೆ. ವೀರಾಜಪೇಟೆ ತಾಲೂಕಿನ ಅಧ್ಯಕ್ಷರಾಗಿ ವಿ.ಪಿ. ಲೋಹಿತ್ ಆಯ್ಕೆ ಮಾಡಲಾಗಿದೆ ಎಂದು ಕೊಡಗು ಜಿಲ್ಲಾ ಮಕ್ಕಳ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಡಿ. ಕೃಷ್ಣಪ್ಪ ತಿಳಿಸಿದ್ದಾರೆ.