ಸೋಮವಾರಪೇಟೆ, ಜು.30: ದಾಂಡೇಲಿಯ ವಕೀಲ ಅಜಿತ್ ನಾಯಕ್ ಹತ್ಯೆ ಪ್ರಕರಣವನ್ನು ಖಂಡಿಸಿ ಸೋಮವಾರಪೇಟೆ ನ್ಯಾಯಾಲಯದ ವಕೀಲರುಗಳು ಕಲಾಪ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.

ಇತ್ತೀಚಿನ ದಿನಗಳಲ್ಲಿ ವಕೀಲರುಗಳ ಮೇಲೆ ಹಲ್ಲೆ, ಹತ್ಯೆಯಂತಹ ಪ್ರಕರಣಗಳು ಸಂಭವಿಸುತ್ತಿದ್ದು, ಇದಕ್ಕೆ ಕಡಿವಾಣ ಹಾಕಬೇಕು. ತಕ್ಷಣ ಹತ್ಯೆ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕೆಂದು ವಕೀಲರ ಸಂಘದ ಉಪಾಧ್ಯಕ್ಷ ಕಾಟ್ನಮನೆ ವಿಠಲ್ ಗೌಡ ಆಗ್ರಹಿಸಿದರು.

ಈ ಸಂದರ್ಭ ವಕೀಲರುಗಳಾದ ರೂಪ, ಪ್ರೀತಿ, ಪರಮೇಶ್, ಯತೀಶ್, ರಾಜೀವ್, ತೇಜ ಸೇರಿದಂತೆ ಇತರರು ಉಪಸ್ಥಿತರಿದ್ದರು.