ಸುಂಟಿಕೊಪ್ಪ, ಜು. 30: ಚಾಲಕನ ನಿಯಂತ್ರಣ ತಪ್ಪಿ ಮುಂಭಾಗ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಇನ್ನೋವ ಡಿಕ್ಕಿ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಈರ್ವರಿಗೆ ಗಾಯ ಜಿಲ್ಲಾ ಆಸ್ಪತ್ರೆಗೆ ದಾಖಲುಗೊಂಡಿರುವ ಕುರಿತು ವರದಿಯಾಗಿದೆ. ನೆಲಮಂಗಲದಿಂದ ಮಡಿಕೇರಿಗೆ ಆಗಮಿಸುತ್ತಿದ್ದ ಇನ್ನೋವಾ (ಕೆಎ04-ಎಂಇ 2041) ಕಾರು ಚಿಕ್ಕಮಗಳೂರಿನಿಂದ ಮಡಿಕೇರಿ ಕಡೆಗೆ ಸಾಮಗ್ರಿ ತುಂಬಿಕೊಂಡು ತೆರಳುತ್ತಿದ್ದ ಲಾರಿಗೆ (ಕೆಎ40ಎ2016) ಬಾಳೆಕಾಡುವಿನಲ್ಲಿ ಮಧ್ಯರಾತ್ರಿ 1 ಗಂಟೆಯ ವೇಳೆಗೆ ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿಯಾಗಿದೆ. ಇನ್ನೋವಾದಲ್ಲಿ ಸಂಚರಿಸುತ್ತಿದ್ದ ನಾಲ್ವರಲ್ಲಿ ಈರ್ವರಿಗೆ ತಲೆ ಮತ್ತು ಕಾಲುಗಳಿಗೆ ಗಂಭೀರ ಪೆಟ್ಟಾಗಿದ್ದು ಈರ್ವರನ್ನು ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆ ಸೇರ್ಪಡೆಗೊಳಿಸಲಾಗಿದೆ.

ಘಟನಾ ಸ್ಥಳಕ್ಕೆ ಸುಂಟಿಕೊಪ್ಪ ಪೊಲಿಸರು ತೆರಳಿ ಮೊಕದ್ದಮೆ ದಾಖಲಿಸಿ ಮಹಜರು ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.