ಗೋಣಿಕೊಪ್ಪ ವರದಿ, ಜು. 29: ಕುಟುಂಬ ಕಲ್ಯಾಣ ಕಾರ್ಯಕ್ರಮದಲ್ಲಿ ಮಹಿಳೆಯರು ಮಾತ್ರವಲ್ಲದೆ ಪುರುಷರೂ ಕೂಡ ಹೆಚ್ಚಾಗಿ ಪಾಲ್ಗೊಳ್ಳುವಂತಾಗಬೇಕು ಎಂದು ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಆನಂದ್ ಅಭಿಪ್ರಾಯಪಟ್ಟರು.ಇಲ್ಲಿನ ಪ್ರೌಢಶಾಲಾ ಸಭಾಂಗಣದಲ್ಲಿ ತಾಲೂಕು ಆರೋಗ್ಯ ಇಲಾಖೆ ವತಿಯಿಂದ ಆಯೋಜಿಸಿದ್ದ ವಿಶ್ವ ಜನಸಂಖ್ಯೆ ದಿನಾಚರಣೆಯಲ್ಲಿ ಮಾತನಾಡಿ, ಜನಸಂಖ್ಯೆ ನಿಯಂತ್ರಣದ ಬಗ್ಗೆ ಎಲ್ಲರೂ ಮಾಹಿತಿ ಪಡೆದುಕೊಳ್ಳುವಂತಾಗಬೇಕು ಎಂದರು. ತಾ.ಪಂ. ಉಪಾಧ್ಯಕ್ಷ ನೆಲ್ಲೀರ ಚಲನ್, ಪೊನ್ನಂಪೇಟೆ ರಾಮಕೃಷ್ಣ ಶಾರದಾಶ್ರಮದ ಅಧ್ಯಕ್ಷ ಬೋಧಸ್ವರೂಪ ನಂದಾಜಿ ಮಾತನಾಡಿದರು. ಈ ಸಂದರ್ಭ ಗೋಣಿಕೊಪ್ಪ ಗ್ರಾ.ಪಂ. ಅಧ್ಯಕ್ಷೆ ಸೆಲ್ವಿ, ಶಾಲಾ ಮುಖ್ಯ ಶಿಕ್ಷಕ ರತೀಶ್ ರೈ, ಜಿಲ್ಲಾ ಆರೋಗ್ಯ ಶೀಕ್ಷಣಾಧಿಕಾರಿ ರಮೇಶ್, ತಾಲೂಕು ಆರೋಗ್ಯ ಅಧಿಕಾರಿ ಡಾ. ಯತಿರಾಜ್ ಉಪಸ್ಥಿತರಿದ್ದರು.