ಮಡಿಕೇರಿ, ಜು. 30: ಕೊಡಗು ಮುಸ್ಲಿಂ ಅಸೋಸಿಯೇಷನ್ ಹಾಗೂ ಶಿಕ್ಷಣ ನಿಧಿ ಆಶ್ರಯದಲ್ಲಿ ಆ. 5 ರಂದು ಬೆಳಿಗ್ಗೆ 10.30ಕ್ಕೆ ವೀರಾಜಪೇಟೆ ಕಾವೇರಿ ಕಲ್ಯಾಣ ಮಂಟಪದಲ್ಲಿ ವಿದ್ಯಾರ್ಥಿ ವೇತನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಲಿದೆ. ಸಂಸ್ಥೆ ಅಧ್ಯಕ್ಷ ದುದ್ದಿಯಂಡ ಹೆಚ್. ಸೂಫಿ ಹಾಜಿ ಅಧ್ಯಕ್ಷತೆಯಲ್ಲಿ ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ, ನಿವೃತ್ತ ಮುಖ್ಯೋಪಾಧ್ಯಾಯ ಕೆ.ಎ. ಉಮ್ಮರ್, ಶಾಸಕ ಕೆ.ಜಿ. ಬೋಪಯ್ಯ, ಮಾಜಿ ಸಚಿವ ಎಂ.ಸಿ. ನಾಣಯ್ಯ, ಪ.ಪಂ. ಅಧ್ಯಕ್ಷ ಜೀವನ್ ಮೊದಲಾದವರು ಪಾಲ್ಗೊಳ್ಳಲಿದ್ದಾರೆ.