ಮಡಿಕೇರಿ, ಸೆ. 20: ವೀರಾಜಪೇಟೆ ಪಟ್ಟಣದಲ್ಲಿ ಗಣೇಶ ಮಂಟಪಗಳ ವಿಸರ್ಜನಾ ಕಾರ್ಯಕ್ರಮದ ಸಮಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಹಾಗೂ ಕಾರ್ಯಕ್ರಮವು ಶಾಂತಿಯುತವಾಗಿ ನಡೆಯಲು ಅನುಕೂಲವಾಗುವಂತೆ ತಾ. 22ರ ಮಧ್ಯ ರಾತ್ರಿ 12 ಗಂಟೆಯಿಂದ ತಾ. 24ರ ಬೆಳಿಗ್ಗೆ 10 ಗಂಟೆಯವರೆಗೆ ವೀರಾಜಪೇಟೆ ಪಟ್ಟಣ ಮತ್ತು ಸುತ್ತಮುತ್ತಲಿನ 10 ಕಿ.ಮೀ ವ್ಯಾಪ್ತಿಯೊಳಗೆ ಬರುವ ಗ್ರಾಮಗಳಲ್ಲಿ ಬಾರ್ ಮತ್ತು ರೆಸ್ಟೋರೆಂಟ್, ಕ್ಲಬ್, ಹೊಟೇಲ್ ಮುಂತಾದವಗಳಲ್ಲಿ ಎಲ್ಲಾ ವಿಧದ ಮದ್ಯಗಳ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಅವರು ಆದೇಶ ಹೊರಡಿಸಿದ್ದಾರೆ.