ಸೋಮವಾರಪೇಟೆ, ಸೆ. 20: ಸಮೀಪದ ಯಡೂರು ಸರ್ಕಾರಿ ಬಿಟಿಸಿಜಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಡಿಕೇರಿಯ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿಂದ, ಭಾರತೀಯ ಸೇನಾ ನೇಮಕಾತಿ ಕುರಿತು ಕಾಲೇಜಿನ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಾಗಾರ ನಡೆಯಿತು.

ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಜಗನ್ನಾಥ್ ಅವರು ಮಾತನಾಡಿ, ಅಕ್ಟೋಬರ್ 13 ರಿಂದ 19 ರವರೆಗೆ ಮಂಡ್ಯದಲ್ಲಿ ಸೇನಾ ನೇಮಕಾತಿ ನಡೆಯಲಿದೆ. ಈ ನೇಮಕಾತಿಯಲ್ಲಿ ಅರ್ಹ ವಿದ್ಯಾರ್ಥಿಗಳು ಪಾಲ್ಗೊಳ್ಳುವಂತೆ ಮನವಿ ಮಾಡಿದರು. ಇದರೊಂದಿಗೆ ಸೇನೆಗೆ ಸೇರಬಯಸುವ ಅಭ್ಯರ್ಥಿಗಳಿಗೆ ಇರಬೇಕಾದ ಶೈಕ್ಷಣಿಕ ಹಾಗೂ ದೈಹಿಕ ಅರ್ಹತೆಗಳ ಬಗ್ಗೆ ವಿವರಿಸಿದರು.

ಈ ಸಂದರ್ಭ ಪ್ರಾಂಶುಪಾಲ ಪ್ರೊ. ಶ್ರೀಧರ್, ನೋಡಲ್ ಅಧಿಕಾರಿ ಪ್ರೊ. ಹೆಚ್.ಎನ್. ರಾಜು, ಪ್ರೊ. ಎನ್.ಎಸ್. ಶಿವಮೂರ್ತಿ, ಉಪನ್ಯಾಸಕ ಸುನಿಲ್, ಪಾಪಣ್ಣ, ಸತೀಶ್ ಸೇರಿದಂತೆ ಉದ್ಯೋಗ ವಿನಿಮಯ ಕಚೇರಿಯ ಸಿಬ್ಬಂದಿ ವಿಠಲ್ ಉಪಸ್ಥಿತರಿದ್ದರು.