ಮಡಿಕೇರಿ, ಸೆ. 20: ಗ್ರೀನ್ಸ್ ಯುವಕ ಸಂಘ, ಕಟ್ಟೆಮಾಡು ಇವರ ವತಿಯಿಂದ ಅಕ್ಟೋಬರ್ 2ರ ಗಾಂಧಿ ಜಯಂತಿಯ ಅಂಗವಾಗಿ ನಡೆಯ ಬೇಕಿದ್ದ ಜಿಲ್ಲಾಮಟ್ಟದ ಗ್ರಾಮೀಣ ಕ್ರೀಡಾಕೂಟ ಮತ್ತು ಹಗ್ಗಜಗ್ಗಾಟ ಕಾರ್ಯಕ್ರಮವನ್ನು ರದ್ದು ಮಾಡಲಾಗಿದೆ. ಕೊಡಗಿನಲ್ಲಿ ನಡೆದ ಪ್ರಕೃತಿ ವಿಕೋಪದ ಪರಿಣಾಮ ಕಾರ್ಯಕ್ರಮವನ್ನು ರದ್ದು ಮಾಡಲಾಗಿದೆ ಮತ್ತು ಅ. 2 ರಂದು ಗ್ರೀನ್ಸ್ ಯುವಕ ಸಂಘದ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನ ಮತ್ತು ಗ್ರೀನ್ಸ್ ಯುವಕ ಸಂಘದ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಮಾಡಲಾಗುವದು ಎಂದು ಯುವಕ ಸಂಘದ ಅಧ್ಯಕ್ಷ ಕಟ್ಟೆಮನೆ ರೋಶನ್ ತಿಳಿಸಿದ್ದಾರೆ.