ಸೋಮವಾರಪೇಟೆ, ಸೆ. 20: ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದ ವಿವಿಧೆಡೆ ಪ್ರತಿಷ್ಠಾಪಿಸಲಾಗಿದ್ದ ಗೌರಿ ಗಣೇಶ ಉತ್ಸವ ಮೂರ್ತಿಗಳನ್ನು ಮೆರವಣಿಗೆ ನಡೆಸಿ ಇಲ್ಲಿನ ಆನೆಕೆರೆಯಲ್ಲಿ ವಿಸರ್ಜಿಸಲಾಯಿತು. ಅಲಂಕೃತ ಮಂಟಪದಲ್ಲಿ ಉತ್ಸವಮೂರ್ತಿಗಳನ್ನು ಕುಳ್ಳಿರಿಸಿ ವಾದ್ಯಗೋಷ್ಠಿಗಳೊಂದಿಗೆ ಮೆರವಣಿಗೆ ನಡೆಸಲಾಯಿತು. ಇಲ್ಲಿನ ಸಾರ್ವಜನಿಕ ಗಣೇಶೋತ್ಸವ ಸಮಿತಿ, ಬಸವೇಶ್ವರ ದೇವಾಲಯ, ಹಾನಗಲ್ಲು, ಜನತಾ ಕಾಲೋನಿಯಲ್ಲಿ ಪ್ರತಿಷ್ಠಾಪಿಸಿದ್ದ ಉತ್ಸವ ಮೂರ್ತಿಗಳನ್ನು ಆನೆಕೆರೆಯಲ್ಲಿ ವಿಸರ್ಜಿಸಲಾಯಿತು.