ಗೋಣಿಕೊಪ್ಪ ವರದಿ, ಸೆ. 21: ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಮರಗೋಡು ಹೈಸ್ಕೂಲ್ ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಅರುವತ್ತೊಕ್ಲು ಸರ್ವದೈವತಾ ಶಾಲೆಯ ಕ್ರೀಡಾಪಟುಗಳು ಅತ್ಯುತ್ತಮ ಸಾಧನೆಯನ್ನು ಮಾಡಿದ್ದಾರೆ.

ಪ್ರೌಢಶಾಲಾ ವಿಭಾಗದ ಚೆಸ್ ಪಂದ್ಯಾಟದಲ್ಲಿ ನೀಲಮ್ಮ, ಆಯುಷ್ ಮುರುಳಿ, ಜೀವನ್ ಹೆಚ್.ಎಸ್ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನಗಳಿಸುವದ ರೊಂದಿಗೆ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪ್ರಾಥಮಿಕ ಶಾಲಾ ವಿಭಾಗದ ಬಾಲಕ, ಬಾಲಕಿಯರ ಥ್ರೋಬಾಲ್, ಪ್ರೌಢಶಾಲಾ ವಿಭಾಗದ ಬಾಲಕಿಯರ ಥ್ರೋಬಾಲ್, ವಾಲಿಬಾಲ್ ಹಾಗೂ ಬಾಲಕರ ವಿಭಾಗದ ಥ್ರೋಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಗಳಿಸಿ ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದೆ. ಶಾಲಾ ದೈಹಿಕ ಶಿಕ್ಷಕರಾದ ಪ್ರಮೋದ್ ವಿ.ಎನ್, ರವಿಚಂದ್ರನ್, ಪವನ್ ಕುಮಾರ್ ಹಾಗೂ ಶೀಲಾ ಬೋಪಣ್ಣ ತರಬೇತಿಯನ್ನು ನೀಡಿದ್ದಾರೆ.