ಮಡಿಕೇರಿ, ಸೆ. 21: ಕೊಡಗು ಜಿಲ್ಲೆಯಲ್ಲಿ 2018ನೇ ಸಾಲಿನಲ್ಲಿ ಬಿದ್ದ ಭಾರೀ ಮಳೆಯಿಂದ ಜಿಲ್ಲೆಯ ಕೃಷಿ, ತೋಟಗಾರಿಕೆ, ಕಾಫಿ, ಏಲಕ್ಕಿ, ಕರಿಮೆಣಸು ಬೆಳೆಗಳು ನಾಶವಾಗಿದ್ದು, ಬೆಳೆ ನಷ್ಟದ ಸಮೀಕ್ಷೆ ನಡೆಸಲು ಈಗಾಗಲೇ ಜಿಲ್ಲಾಡಳಿತದ ವತಿಯಿಂದ ಕಾಫಿ ಮಂಡಳಿ, ತೋಟಗಾರಿಕೆ, ಕೃಷಿ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳನ್ನೊಳಗೊಂಡ ಒಟ್ಟು 100 ತಂಡಗಳನ್ನು ರಚಿಸಲಾಗಿದ್ದು, ಸದರಿ ತಂಡಗಳು ಜಿಲ್ಲೆಯಾದ್ಯಂತ ಬೆಳೆ ನಷ್ಟ ಹಾಗೂ ಭೂಕುಸಿತದಿಂದ ಉಂಟಾದ ತೋಟದ ನಷ್ಟದ ಬಗ್ಗೆ ಸಮೀಕ್ಷೆ ನಡೆಸುತ್ತಿದೆ. ಈ ದಿಸೆಯಲ್ಲಿ ಜಿಲ್ಲೆಯ ಎಲ್ಲಾ ರೈತರು / ಬೆಳೆಗಾರರು ಸಹಕರಿಸಲು ಹಾಗೂ ಮಾಹಿತಿಗಾಗಿ ತಮ್ಮ ಗ್ರಾಮ ವ್ಯಾಪ್ತಿಯ ಗ್ರಾಮಲೆಕ್ಕಾಧಿಕಾರಿಗಳು, ಕಂದಾಯ ನಿರೀಕ್ಷಕರು ಅಥವಾ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು ಸಂಪರ್ಕಿಸಲು ಕೋರಲಾಗಿದೆ. ಈ ಬಗ್ಗೆ ಕೆಳಕಂಡಂತೆ ತಾಲೂಕುವಾರು ಸಹಾಯವಾಣಿಗಳನ್ನು ಸಹ ಸ್ಥಾಪಿಸಲಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬಹುದಾಗಿದೆ.

ಮಡಿಕೇರಿ ತಾಲೂಕು ದೂ. 08272-228396, ವೀರಾಜಪೇಟೆ ದೂ. 08274-257328, ಸೋಮವಾರಪೇಟೆ ದೂ. 08276-282045.