ಮಡಿಕೇರಿ, ಸೆ. 21: ಮಡಿಕೇರಿಯ ಜೂನಿಯರ್ ಕಾಲೇಜು ಆವರಣದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಬಡ್ತಿ ಪ್ರೌಢಶಾಲಾ ಸಹಶಿಕ್ಷಕರ ಸಂಘದ ವಾರ್ಷಿಕ ಮಹಾಸಭೆ ನಡೆಯಿತು. ಸಭೆಯಲ್ಲಿ ಅತಿಥಿಗಳಾಗಿ ನಿವೃತ್ತ ಶಿಕ್ಷಕರಾದ ಶಿವದೇವಿ ಅವನಿಶ್ಚಂದ್ರ ಹಾಗೂ ಜಲಜಾಕ್ಷಿ ಆಗಮಿಸಿದ್ದರು. ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಮಂಜುನಾಥ ಕೆ.ಎನ್. ಇವರನ್ನು ಸನ್ಮಾನಿಸಲಾಯಿತು. ಸಭೆಯಲ್ಲಿ ಶಿಕ್ಷಕರ ಸಮಸ್ಯೆಗಳು ಹಾಗೂ ಶೈಕ್ಷಣಿಕ ವಿಷಯಗಳ ಬಗ್ಗೆ ಚರ್ಚಿಸಲಾಯಿತು. ಮಂಜುನಾಥ ಅಧ್ಯಕ್ಷತೆ ವಹಿಸಿದ್ದರು, ಶೇಖರ್ ಹಂಡ್ಲಿ ಪ್ರಾರ್ಥಿಸಿದರು, ಪುಷ್ಪ ಡಿ.ಹೆಚ್. ಪ್ರಾಸ್ತಾವಿಕ ನುಡಿಗಳನಾಡಿದರು, ಪುಷ್ಪ ಕೆ.ಕೆ. ವಾರ್ಷಿಕ ಲೆಕ್ಕಪತ್ರ ಮಂಡಿಸಿದರು, ಉಷಾರಾಣಿ ನಿರೂಪಿಸಿದರು. ಸಭೆಯಲ್ಲಿ ಗೌರವಾಧ್ಯಕ್ಷರಾದ ರೋಹಿಣಿ, ಪುಷ್ಪವೇಣಿ, ಅನ್ನಮ್ಮ, ಮೂರ್ತಿ ಹಾಗೂ ಪದಾಧಿಕಾರಿಗಳು ಮತ್ತು ಸದಸ್ಯರು ಹಾಜರಿದ್ದರು.