ಮಡಿಕೇರಿ, ಅ. 25: ಕೊಡಗಿನಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದ ಸಂತ್ರಸ್ತರಾದ ಫೀ.ಮಾ. ಕೆ.ಎಂ. ಕಾರ್ಯಪ್ಪ ಕಾಲೇಜಿನ ಇಬ್ಬರು ಅರ್ಥಶಾಸ್ತ್ರ ಸ್ನಾತಕೋತ್ತರ ವಿದ್ಯಾರ್ಥಿಗಳು ಪ್ರವೇಶ ಶುಲ್ಕದ ಮೊತ್ತ ರೂ. 34,100ನ್ನು ಮಡಿಕೇರಿ ರಾಜರಾಜೇಶ್ವರಿ ಆಸ್ಪತ್ರೆಯ ಮಾಲೀಕರಾದ ಡಾ. ರಾಜೇಶ್ವರಿಯವರು ಉದಾರವಾಗಿ ನೀಡಿ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸವನ್ನು ಮುಂದುವರಿಸಲು ಸಹಕರಿಸಿದ್ದಾರೆ.