ಮಡಿಕೇರಿ, ಅ. 26: ಮೂರ್ನಾಡುವಿನ ಮಾರುತಿ ವಿದ್ಯಾಸಂಸ್ಥೆಯಲ್ಲಿ ತಾ. 27 ರಂದು (ಇಂದು) ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಪೋಷಕರ ದಿನಾಚರಣೆ ಕಾರ್ಯಕ್ರಮ ಬೆಳಿಗ್ಗೆ 10.30ಕ್ಕೆ ನಡೆಯಲಿದೆ. ಸಂಸ್ಥೆಯ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಡಾ. ಮೋಹನ್ ಅಪ್ಪಾಜಿ ಅವರು ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಈ ಸಂದರ್ಭ ದ್ವಿತೀಯ ಪಿಯುಸಿಯಲ್ಲಿ ಜಿಲ್ಲೆಗೆ ಮೂರನೇ ಸ್ಥಾನ ಪಡೆದ ಶೃತಿ ಬಿ.ಎ. ಹಾಗೂ ನ್ಯಾಯಾಧೀಶರಾಗಿ ಆಯ್ಕೆಯಾಗಿರುವ ಶಾಲೆಯ ವಿದ್ಯಾರ್ಥಿನಿ ಸಲ್ಮಾ ಅವರನ್ನು ಸನ್ಮಾನಿಸಲಾಗುತ್ತದೆ.