ಸಂಜಾಜೆ, ಅ. 27: ಸಂಪಾಜೆ ಗ್ರಾಮ ಪಂಚಾಯಿತಿ ಸದಸ್ಯರಾಗಿದ್ದ ಬಿ.ಎನ್. ರಾಜೇಶ್ (45) ಇಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತುಸು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವಿವಾಹಿತನಾಗಿದ್ದ ರಾಜೇಶ್ ಇಂದು ತನ್ನ ಬಂಧುಗಳ ಮನೆಗೆ ತೆರಳಿದ್ದು, ಮನೆಯಲ್ಲಿ ಯಾರೂ ಇಲ್ಲದ ವೇಳೆ ಮಧ್ಯಾಹ್ನ ಸಮಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಎರಡು ಬಾರಿ ಪಂಚಾಯಿತಿಗೆ ಆಯ್ಕೆಯಾಗಿದ್ದ ರಾಜೇಶ್ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಪಯಸ್ವಿನಿ ಯುವಕ ಸಂಘದ ಸಕ್ರಿಯ ಸದಸ್ಯನೂ ಆಗಿರುವ ರಾಜೇಶ್ ಇತ್ತೀಚೆಗೆ ಜೋಡುಪಾಲ ಬಳಿ ಸಂಭವಿಸಿದ ಪ್ರಕೃತಿ ವಿಕೋಪ ಸಂದರ್ಭ ಹಗಲು - ರಾತ್ರಿ ಸಂತ್ರಸ್ತರ ನೆರವಿವೆ ಧಾವಿಸಿ ನೆರವಾಗಿದ್ದರು ಎಂದು ಪಂಚಾಯಿತಿ ಮಾಜಿ ಅಧ್ಯಕ್ಷ ಬಾಲಚಂದ್ರ ಕಳಗಿ ತಿಳಿಸಿದ್ದಾರೆ. ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂತಾಪ : ರಾಜೇಶ್ ಅವರ ನಿಧನಕ್ಕೆ ಸಂಪಾಜೆ ಭಾರತೀಯ ಜನತಾ ಪಾರ್ಟಿ ಸ್ಥಾನೀಯ ಸಮಿತಿಯವರು ಹಾಗೂ ಗ್ರಾಮಸ್ಥರು ಸಂತಾಪ ವ್ಯಕ್ತಪಡಿಸಿದ್ದಾರೆ.