ಶನಿವಾರಸಂತೆ, ಅ. 27: ದುಂಡಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾದ್ರೆ ಹೊಸಳ್ಳಿ ಗ್ರಾಮದ ಸರ್ವೆ ನಂ. 51/7ರ 72 ಎಕರೆ ಪೈಸಾರಿ ಜಾಗದಲ್ಲಿ ಗುತ್ತಿಗೆದಾರ ರೊಬ್ಬರು ಅಕೇಸಿಯಾ ಹಾಗೂ ನೀಲಗಿರಿ ಮರಗಳನ್ನು ಕಡಿಯುವ ಸಲುವಾಗಿ ನಂಬರ್ ಹಾಕುತ್ತಿದ್ದಾರೆ ಎಂದು ಗ್ರಾಮಸ್ಥರು ಜಿಲ್ಲಾ ಅರಣ್ಯಾಧಿಕಾರಿಯವರಿಗೆ ಮನವಿ ಸಲ್ಲಿಸಿದ್ದಾರೆ.

ಆ ಜಾಗದ ಬಗ್ಗೆ ಗ್ರಾಮಸ್ಥರು ಹಾಗೂ ಹೇಮಾವತಿ ಹಿನ್ನೀರಿನ ಮುಳುಗಡೆ ಸಂತ್ರಸ್ತರ ನಡುವೆ ತಕರಾರು ಇದ್ದು, ವಿವಾದ ಹೈಕೋರ್ಟ್‍ನಲ್ಲಿ ದಾಖಲಾಗಿ ತಡೆಯಾಜ್ಞೆಯಾಗಿದೆ. ತೀರ್ಮಾನ ಆಗುವವರೆಗೆ ಯಥಾಸ್ಥಿತಿ ಕಾಪಾಡುವಂತೆ ಆದೇಶವಾಗಿದೆ ಎಂದು ತಿಳಿಸಿದ್ದಾರೆ.

ನ್ಯಾಯಾಲಯದ ತೀರ್ಪು ಬರುವವರೆಗೆ ಮರ ಕಡಿಯದಿರುವಂತೆ ತಡೆ ಹಿಡಿಯಬೇಕು ಎಂದು ಗ್ರಾಮಸ್ಥರು 35 ಮಂದಿ ಮನವಿ ಮೂಲಕ ಆಗ್ರಹಿಸಿದ್ದಾರೆ.