*ಗೋಣಿಕೊಪ್ಪ, ಅ. 27: ಕರ್ತವ್ಯ ನಿರತ ಮಾರ್ಗದಾಳು (ಲೈನ್ ಮೆನ್) ಮೇಲೆ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಹಲ್ಲೆ ನಡೆಸಿರುವದಾಗಿ ಪೊನ್ನಂಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪೊನ್ನಂಪೇಟೆ ಚೆಸ್ಕಾಂ ಉಪಕೇಂದ್ರದ ಮಾರ್ಗದಾಳು ಮಹದೇವಸ್ವಾಮಿ ಮೇಲೆ ಪೊನ್ನಂಪೇಟೆ ಸಾಯಿಶಂಕರ್ ವಿದ್ಯಾಸಂಸ್ಥೆಯ ಅಧ್ಯಕ್ಷ ಕೊಳೇರ ಝರು ಗಣಪತಿ ಹಲ್ಲೆ ನಡೆಸಿದ್ದಾರೆ.ಶನಿವಾರ ಬೆಳಿಗ್ಗೆ ಲೈನ್‍ಮೆನ್ ಮಹದೇವಸ್ವಾಮಿ ಶಿಕ್ಷಣ ಸಂಸ್ಥೆಯಲ್ಲಿ ಉಳಿಸಿಕೊಂಡ ರೂ. 1.5 ಲಕ್ಷ ಮೊತ್ತದ ವಿದ್ಯುತ್ ಬಿಲ್ಲನ್ನು ಪಾವತಿಸುವಂತೆ ಮನವಿ ಮಾಡಿದರು. ಬಿಲ್ ಪಾವತಿಸದೆ ಇದ್ದರೆ ವಿದ್ಯುತ್ ಸಂಪರ್ಕ ಕಡಿತಗೊಳಿಸಲು ಅಧಿಕಾರಿಗಳು ತಿಳಿಸಿದ್ದಾರೆ ಎಂದು ಅಧ್ಯಕ್ಷರಿಗೆ ಮಾಹಿತಿ ನೀಡಿದರು. ಈ ಸಂದರ್ಭ ವಿದ್ಯುತ್ ಸಂಪರ್ಕ ಕಡಿತಗೊಳಿಸಲು ನೀನು ಯಾರು ಎಂದು ಪ್ರಶ್ನಿಸುತ್ತಾ ಅವಾಚ್ಯ ಶಬ್ಧಗಳಿಂದ ನಿಂದಿಸಿ ಏಕಾಏಕಿ ಹಲ್ಲೆ ನಡೆಸಿದ್ದಾರೆ ಎಂದು ಮಹದೇವಸ್ವಾಮಿ ಪೊಲೀಸ್ ದೂರಿನಲ್ಲಿ ಆರೋಪಿಸಿದ್ದಾರೆ.ಪೊನ್ನಂಪೇಟೆ ಚೆಸ್ಕಾಂ ಉಪಕೇಂದ್ರದ ಮಾರ್ಗದಾಳು ಮಹದೇವಸ್ವಾಮಿ ಮೇಲೆ ಪೊನ್ನಂಪೇಟೆ ಸಾಯಿಶಂಕರ್ ವಿದ್ಯಾಸಂಸ್ಥೆಯ ಅಧ್ಯಕ್ಷ ಕೊಳೇರ ಝರು ಗಣಪತಿ ಹಲ್ಲೆ ನಡೆಸಿದ್ದಾರೆ.

ಶನಿವಾರ ಬೆಳಿಗ್ಗೆ ಲೈನ್‍ಮೆನ್ ಮಹದೇವಸ್ವಾಮಿ ಶಿಕ್ಷಣ ಸಂಸ್ಥೆಯಲ್ಲಿ ಉಳಿಸಿಕೊಂಡ ರೂ. 1.5 ಲಕ್ಷ ಮೊತ್ತದ ವಿದ್ಯುತ್ ಬಿಲ್ಲನ್ನು ಪಾವತಿಸುವಂತೆ ಮನವಿ ಮಾಡಿದರು. ಬಿಲ್ ಪಾವತಿಸದೆ ಇದ್ದರೆ ವಿದ್ಯುತ್ ಸಂಪರ್ಕ ಕಡಿತಗೊಳಿಸಲು ಅಧಿಕಾರಿಗಳು ತಿಳಿಸಿದ್ದಾರೆ ಎಂದು ಅಧ್ಯಕ್ಷರಿಗೆ ಮಾಹಿತಿ ನೀಡಿದರು. ಈ ಸಂದರ್ಭ ವಿದ್ಯುತ್ ಸಂಪರ್ಕ ಕಡಿತಗೊಳಿಸಲು ನೀನು ಯಾರು ಎಂದು ಪ್ರಶ್ನಿಸುತ್ತಾ ಅವಾಚ್ಯ ಶಬ್ಧಗಳಿಂದ ನಿಂದಿಸಿ ಏಕಾಏಕಿ ಹಲ್ಲೆ ನಡೆಸಿದ್ದಾರೆ ಎಂದು ಮಹದೇವಸ್ವಾಮಿ ಪೊಲೀಸ್ ದೂರಿನಲ್ಲಿ ಆರೋಪಿಸಿದ್ದಾರೆ.