ವೀರಾಜಪೇಟೆ, ಅ. 28: ಇಲ್ಲಿಗೆ ಸಮೀಪದ ದೇವಣಗೇರಿ ಬಿ.ಪಿ. ಪ್ರೌಢಶಾಲೆಯಲ್ಲಿ ರೋಟರಿ ಸಂಸ್ಥೆ ವತಿಯಿಂದ ವಿದ್ಯಾರ್ಥಿಗಳಿಗೆ ದಂತ ರಕ್ಷಣೆ ಮತ್ತು ಹದಿಹರೆಯದ ಸಮಸ್ಯೆ ಕುರಿತು ಸಮಾಲೋಚನೆ ಕಾರ್ಯಕ್ರಮವನ್ನು ಶಾಲಾ ಅಧ್ಯಕ್ಷ ಮುಕ್ಕಾಟಿರ ಸುನಿಲ್ ನಾಣಯ್ಯ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ಡಾ. ಲವೀನ್ ಮತ್ತು ಡಾ. ಪ್ರಿಯದರ್ಶಿನಿ ಇವರಿಂದ ಶಾಲಾ ವಿದ್ಯಾರ್ಥಿಗಳಿಗೆ ಮತ್ತು ವಿದ್ಯಾರ್ಥಿನಿಯರಿಗೆ ಪ್ರತ್ಯೇಕವಾಗಿ ಸಮಾಲೋಚನೆ ನಡೆಸಲಾಯಿತು. ರೋಟರಿ ಸಂಸ್ಥೆ ವತಿಯಿಂದ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಬ್ರಷ್ ಮತ್ತು ಟೂತ್ ಪೇಸ್ಟ್‍ಗಳನ್ನು ಉಚಿತವಾಗಿ ನೀಡಲಾಯಿತು. ಶಾಲಾ ಮುಖ್ಯ ಶಿಕ್ಷಕ ಹೆಚ್.ಡಿ. ಲೋಕೇಶ್ ಸ್ವಾಗತದೊಂದಿಗೆ, ರೋಟರಿ ಸಂಸ್ಥೆಯ ಅಧ್ಯಕ್ಷ ರವಿ, ಶಾಲಾ ಶಿಕ್ಷಕ ವೃಂದ, ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಭಾವವಹಿಸಿದ್ದರು. ಸಹ ಶಿಕ್ಷಕಿ ವೈ. ಪ್ರಮೀಳಕುಮಾರಿ ನಿರೂಪಿಸಿ, ಎ.ಸಿ. ಸುನಿತ ವಂದಿಸಿದರು.