ಮಡಿಕೇರಿ, ಅ. 29: ಶಬರಿಮಲೆ ಶ್ರೀ ಅಯ್ಯಪ್ಪಸ್ವಾಮಿ ದೇವಾಲಯದ ಪಾವಿತ್ರ್ಯತೆಯ ಉಳಿವಿಗಾಗಿ ಮಡಿಕೇರಿಯ ಶ್ರೀ ಅಯ್ಯಪ್ಪ ಸ್ವಾಮಿ ಸಂರಕ್ಷಣಾ ಸಮಿತಿ ವತಿಯಿಂದ ತಾ. 2ರಂದು ನಗರದಲ್ಲಿ ನಡೆಯುವ ಸಾಂಕೇತಿಕ ಪ್ರತಿಭಟನಾ ಮೆರವಣಿಗೆಗೆ ಕೊಡಗು ಗೌಡ ಸಮಾಜ ತನ್ನ ಬೆಂಬಲವನ್ನು ನೀಡುತ್ತದೆ. ಮೆರವಣಿಗೆಯಲ್ಲಿ ಕೊಡಗು ಗೌಡ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಗೌಡ ಸಮಾಜದ ಅಧ್ಯಕ್ಷ ಪೇರಿಯನ ಪಿ. ಜಯಾನಂದ, ಕಾರ್ಯದರ್ಶಿ ಕೋಡಿ ಚಂದ್ರಶೇಖರ್ ತಿಳಿಸಿದ್ದಾರೆ.