ಕೂಡಿಗೆ, 29 : ಒಂದು ವಾರದಿಂದ ಡೆಂಗ್ಯೂ ಜ್ವರದಿಂದ ನರಳುತ್ತಿದ್ದ ವ್ಯಕ್ತಿಯೊಬ್ಬರು ಇಂದು ಸಾವನ್ನಪ್ಪಿದ್ದಾರೆ. ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಸೀಗೆಹೊಸೂರು ಗ್ರಾಮದ ಮಾದವ ಆಚಾರ್ ಎಂಬವರ ಮಗ ರಾಜು (50) ಡೆಂಗ್ಯೂನಿಂದ ಮೃತಪಟ್ಟ ವ್ಯಕ್ತಿ. ರಾಜು ಕಳೆದ ಒಂದು ವಾರದಿಂದ ಡೆಂಗ್ಯೂ ಜ್ವರದಿಂದ ಮಡಿಕೇರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದ್ದಿದ್ದರು. ಜ್ವರ ಕಡಿಮೆಯಾಗದ ಕಾರಣ ಮೈಸೂರಿನ ಆಸ್ಪತೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುತ್ತಾರೆ. ಮೃತ ವ್ಯಕ್ತಿ 3 ಮಕ್ಕಳು ಹಾಗೂ ಪತ್ನಿಯನ್ನು ಅಗಲಿದ್ದಾರೆ.