ಕರಿಕೆ, ಅ. 29: ಇಲ್ಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧÀ್ಯಕ್ಷರಾಗಿ ಬೇಕಲ್. ಜೆ. ಶರಣ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಹೊಸಮನೆ ಮೀನಾಕ್ಷಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಒಟ್ಟು ಹನ್ನೆರಡು ಮಂದಿ ಸದಸ್ಯರಲ್ಲಿ ಹನ್ನೊಂದು ಮಂದಿ ಜೆಡಿಎಸ್- ಕಾಂಗ್ರೆಸ್ ಮೈತ್ರಿ ಕೂಟದಿಂದ ಆಯ್ಕೆಯಾಗಿದ್ದು ಒಬ್ಬರು ಬಿಜೆಪಿ ಬೆಂಬಲಿಗರಾಗಿ ಆಯ್ಕೆಯಾಗಿದ್ದರು. ಸಂಘದ ಕಚೇರಿಯಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಚುನಾವಣಾಧಿಕಾರಿ ಯಾಗಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಿಪಿನ್ ಕಾರ್ಯ ನಿರ್ವಹಿಸಿದರು. ಈ ಸಂದರ್ಭ ಬ್ಯಾಂಕ್‍ನ ಮೇಲ್ವಿಚಾರಕ ವಿ.ಜಿ. ಹರೀಶ್, ಕಾರ್ಯನಿರ್ವಹಣಾ ಅಧಿಕಾರಿ ಗಂಗಾಧರ ಎನ್.ಸಿ. ಹಾಗೂ ನಿರ್ದೇಶಕರುಗಳು ಉಪಸ್ಥಿತರಿದ್ದರು.