ಮೂರ್ನಾಡು, ಅ. 29 : ಜಿಲ್ಲೆಯಲ್ಲಿ ಇತ್ತೀಚೆಗೆ ಕಂಡ ಪ್ರಕೃತಿ ವಿಕೋಪದಿಂದ ತಮ್ಮ ತೋಟ ಭತ್ತದ ಗದ್ದೆಗಳನ್ನು ಕಳೆದುಕೊಂಡಿರುವ ಮುಕ್ಕೋಡ್ಲು ಗ್ರಾಮದ ಕಾಳಚಂಡ ಟಿ. ಕಾರ್ಯಪ್ಪ ಅವರಿಗೆ ಮೂರ್ನಾಡು ಜ್ಞಾನಜ್ಯೋತಿ ವಿದ್ಯಾಸಂಸ್ಥೆಯ ವತಿಯಿಂದ 35000ರೂ. ಪರಿಹಾರ ಧನ ನೀಡಲಾಯಿತು. ಈ ಸಂದರ್ಭ ವಿದ್ಯಾಸಂಸ್ಥೆಯ ಅಧ್ಯಕ್ಷ ಮಾಳೇಟಿರ ನವೀನ್ ಕಾರ್ಯಪ್ಪ, ಖಜಾಂಚಿ ಬಡುವಂಡ ಬೆಲ್ಲು ಚಿಣ್ಣಪ್ಪ, ನಿರ್ದೇಶಕ ಅವರೆಮಾದಂಡ ಸುಗುಣ ಸುಬ್ಬಯ್ಯ ಮತ್ತು ಮುಖ್ಯ ಶಿಕ್ಷಕಿ ಶೀಲಾ ಅಬ್ದುಲ್ಲಾ ಹಾಜರಿದ್ದರು. ಕಾಳಚಂಡ ಕಾರ್ಯಪ್ಪ ಮಗಳು ಕೆ.ಕೆ. ಇಂಪಾ ಮೂರ್ನಾಡು ಜ್ಞಾನಜ್ಯೋತಿ ವಿದ್ಯಾಸಂಸ್ಥೆಯಲ್ಲಿ ಎರಡನೆ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ.