ಸೋಮವಾರಪೇಟೆ, ಅ. 31: ತಾಲೂಕು ಒಕ್ಕಲಿಗರ ಸಂಘದ ಸುವರ್ಣ ಮಹೋತ್ಸವ ಕಾರ್ಯಕ್ರಮ ನಡೆಸಲು ಜನಾಂಗ ಬಾಂಧವರ ಸಲಹಾ ಸಭೆ ನ. 5 ರಂದು ಬೆಳಿಗ್ಗೆ 10.30ಕ್ಕೆ ಒಕ್ಕಲಿಗರ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಎ.ಆರ್. ಮುತ್ತಣ್ಣ ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಜಿಲ್ಲಾ, ತಾಲೂಕು, ಹೋಬಳಿಗಳ ಒಕ್ಕಲಿಗರ ಸಂಘದ ಪದಾಧಿಕಾರಿಗಳು, ಗ್ರಾಮಾಭಿವೃದ್ಧಿ ಮಂಡಳಿ ಅಧ್ಯಕ್ಷರುಗಳು, ಜನಾಂಗದ ಜನಪ್ರತಿನಿಧಿಗಳು, ಸದಸ್ಯರುಗಳು ಭಾಗವಹಿಸಲಿದ್ದಾರೆ. ಅಂದು ಅಪರಾಹ್ನ 12.30ಕ್ಕೆ ಸುವರ್ಣದ್ವಾರ ಕಟ್ಟಡದ ಭೂಮಿ ಪೂಜೆ ನೆರವೇರಲಿದ್ದು, ಸಂಸದ ಪ್ರತಾಪ್ ಸಿಂಹ, ಶಾಸಕ ಎಂ.ಪಿ. ಅಪ್ಪಚ್ಚು ರಂಜನ್, ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ, ಬೆಂಗಳೂರಿನ ದಾನಿ ಬಿ.ಈ. ರಾಮಚಂದ್ರ ಅವರುಗಳು ಭಾಗವಹಿಸಲಿದ್ದಾರೆ ಎಂದು ಮುತ್ತಣ್ಣ ತಿಳಿಸಿದ್ದಾರೆ.