ಮಡಿಕೇರಿ, ಅ. 31: ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಡಾ. ಟಿ.ಡಿ. ತಿಮ್ಮಯ್ಯ ಅವರನ್ನು ಮಂಗಳೂರು ವಿಶ್ವವಿದ್ಯಾನಿಲಯ ನೇಮಕ ಮಾಡಿದೆ. ವಯೋನಿವೃತ್ತಿ ಹೊಂದಿದ ಪ್ರಾಂಶುಪಾಲೆ ಡಾ. ಪಾರ್ವತಿ ಎ.ಎ. ಅವರಿಂದ ಅಧಿಕಾರವನ್ನು ಇಂದು ವಹಿಸಿಕೊಂಡರು.

ಡಾ. ತಿಮ್ಮಯ್ಯ ಅವರು ತಮ್ಮ 34 ವರ್ಷಗಳ ಶೈಕ್ಷಣಿಕ ಸೇವೆಯಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜು, ಕುಶಾಲನಗರ, ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು ಮತ್ತು ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು, ಮಡಿಕೇರಿ ಇಲ್ಲಿ ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾಗಿ, ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಕೆ.ಎಂ. ಕಾರ್ಯಪ್ಪ ಕಾಲೇಜಿನ ಸ್ನಾತಕೋತ್ತರ ಅರ್ಥಶಾಸ್ತ್ರ ವಿಭಾಗದ ಮತ್ತು ಮಂಗಳೂರು ವಿಶ್ವವಿದ್ಯಾನಿಲಯ ದೂರಶಿಕ್ಷಣ ಮಡಿಕೇರಿ ಅಧ್ಯಯನ ಕೇಂದ್ರ ಇವುಗಳ ಸಂಯೋಜಕರಾಗಿ ಕೂಡ ಸೇವೆ ಸಲ್ಲಿಸಿದ್ದಾರೆ.