ಸುಂಟಿಕೊಪ್ಪ, ಅ.31: ಇಲ್ಲಿನ ರಾಷ್ಟ್ರೀಯ ಹೆದ್ದಾರಿಯ ಶಾಂತಿಗಿರಿ ತೋಟದ ಸಮೀಪದ ತಿರುವಿನಲ್ಲಿ ಮಡಿಕೇರಿಯಿಂದ ಮೈಸೂರಿಗೆ ತೆರಳುತ್ತಿದ್ದ ಟ್ಯಾಂಕರ್ ಮಗುಚಿದ ಪರಿಣಾಮ ಕ್ಲೀನರ್ ಗಾಯಗೊಂಡು ಆಸ್ಪತ್ರೆ ಸೇರಿದ ಘಟಣೆ ಮಂಗಳವಾರ ರಾತ್ರಿ ಸಂಬವಿಸಿದೆ.

ಮೈಸೂರಿನ ಪವನ್ ಎಂಬವರಿಗೆ ಸೇರಿದ ಟ್ಯಾಂಕರ್ ಲಾರಿಯೊಂದು ಮಡಿಕೇರಿ ನಗರಕ್ಕೆ ಪೆಟ್ರೋಲ್ ವಿತರಿಸಿ ಮೈಸೂರಿಗೆ ತೆರಳುವ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಪರಿಣಾಮ ಕ್ಲೀನರ್ ಗುರುಪ್ರಸಾದ್ ತಲೆ ಕಾಲು ಕೈಗೆ ಗಾಯಗೊಂಡು ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದು, ಚಾಲಕ ರಮೇಶ ಯಾವದೇ ಗಾಯಗಳಾಗದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸುಂಟಿಕೊಪ್ಪ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.