ಕುಶಾಲನಗರ, ನ. 1: ಕಾಂಗ್ರೆಸ್-ಜೆಡಿಎಸ್ ಹೊಂದಾಣಿಕೆ ಮೂಲಕ ಕುಶಾಲನಗರ ಪಟ್ಟಣ ಪಂಚಾಯಿತಿಯ ಆಡಳಿತ ನಡೆಸಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ. ಮಹೇಶ್ ತಿಳಿಸಿದ್ದಾರೆ.

ನೋಂದಣಿ ಮತ್ತು ಮುದ್ರಾಂಕ ಇಲಾಖೆ ವತಿಯಿಂದ ಕುಶಾಲನಗರ ದಲ್ಲಿ ನೂತನವಾಗಿ ಪ್ರಾರಂಭಗೊಂಡ ಉಪನೋಂದಣಾಧಿಕಾರಿ ಮತ್ತು ವಿವಾಹ ನೋಂದಣಿ ಕಚೇರಿಯನ್ನು ಉದ್ಘಾಟಿಸಿದ ಬಳಿಕ ಮಾತನಾಡಿದ ಸಚಿವರು, ರಾಜ್ಯದಲ್ಲಿರುವಂತೆ ಎಲ್ಲೆಡೆ ಸ್ಥಳೀಯ ಸಂಸ್ಥೆಗಳಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಆಡಳಿತ ನಿರ್ಮಾಣವಾಗಲಿದೆ ಎಂದರು.

ಕುಶಾಲನಗರದಲ್ಲಿ ನೆನೆಗುದಿಗೆ ಬಿದ್ದಿರುವ ಉಪತಹಶೀಲ್ದಾರ್ ಮತ್ತು ಸಾರಿಗೆ ಬಸ್ ಡಿಪೋ ನಿರ್ಮಾಣಕ್ಕೆ ಕೂಡಲೇ ಅಗತ್ಯ ಕ್ರಮ ಕೈಗೊಳ್ಳುವದಾಗಿ ಅವರು ತಿಳಿಸಿದರು.

ಈ ಸಂದರ್ಭ ಮಡಿಕೇರಿ ಕ್ಷೇತ್ರ ಶಾಸಕ ಅಪ್ಪಚ್ಚು ರಂಜನ್, ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ಜಿ.ಪಂ. ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಸದಸ್ಯರುಗಳಾದ ಕೆ.ಪಿ. ಚಂದ್ರಕಲಾ, ಮಂಜುಳಾ, ಸುನಿತಾ, ತಾ.ಪಂ. ಸದಸ್ಯೆ ಪುಷ್ಪ, ಜಿಲ್ಲಾಧಿಕಾರಿ ಶ್ರೀವಿದ್ಯಾ, ಜಿಲ್ಲಾ ನೋಂದಣಿ ಅಧಿಕಾರಿ ಎಸ್. ಸಿದ್ದೇಶ್, ಸ್ಥಳೀಯ ಜನಪ್ರತಿನಿಧಿಗಳು, ಪ್ರಮುಖರು ಇದ್ದರು.