ಮಡಿಕೇರಿ, ನ. 1: ಕುಶಾಲನಗರದ ಶ್ರೀ ಸಾಯಿ ಬಡಾವಣೆಯ ಶ್ರೀ ಶಿರಡಿ ಸಾಯಿನಾಥ ಮಂದಿರದಲ್ಲಿ ಸಾಯಿ ಸಹಸ್ರನಾಮ ಹೋಮ ಶ್ರದ್ಧಾಭಕ್ತಿಯಿಂದ ಜರುಗಿತು.

ಕಾಕಡಾರತಿ, ಪಂಚಾಮೃತ ಅಭಿಷೇಕ, ಸಾಯಿ ಸಹಸ್ರನಾಮ ಹೋಮ, ಧೂಪಾರತಿ, ಶೀಜಾರತಿ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳಿಗೆ ಭಕ್ತರು ಸಾಕ್ಷಿಯಾದರು.

ಮಹಾಮಂಗಳಾರತಿಯ ನಂತರ ಭಕ್ತರಿಗೆ ಅನ್ನಸಂತರ್ಪಣೆ ನಡೆಯಿತು. ಸಂಜೆ ನಡೆದ ಸಾಯಿ ಭಜನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು. ತಾ. 23 ರಂದು ಮಂದಿರದಲ್ಲಿ ಸಾಮೂಹಿಕ ಸತ್ಯ ನಾರಾಯಣ ಪೂಜೆ ನಡೆಯಲಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ.