ಮಡಿಕೇರಿ, ನ. 1: ಮಡಿಕೇರಿ ನಗರದ ಅಂಚಿನ ಕರ್ಣಂಗೇರಿ ಗ್ರಾಮದಲ್ಲಿರುವ ಶ್ರೀ ರಾಜರಾಜೇಶ್ವರಿ ದೇವಾಲಯದಲ್ಲಿ ನವೆಂಬರ್ 7 ರಂದು ರಾತ್ರಿ ‘ಅಮಾವಾಸ್ಯೆ ದೀಪೋತ್ಸವ’ ನಡೆಯಲಿದೆ.

ದೀಪೋತ್ಸವದ ಬಗ್ಗೆ ದೇವಾಲಯದ ಧರ್ಮದರ್ಶಿಗಳಾದ ಗೋವಿಂದ ಸ್ವಾಮಿ ಅವರು ಮಾಹಿತಿ ನೀಡಿದ್ದು, ನ. 7 ರಂದು ರಾತ್ರಿ 7 ಗಂಟೆಗೆ ದೇವಾಲಯದಲ್ಲಿ ಕಲಶ ಪೂಜೆ, ರಾತ್ರಿ 8 ಗಂಟೆಗೆ ಅನ್ನದಾನ, ಪ್ರಸಾದ ವಿನಿಯೋಗ, ರಾತ್ರಿ 9 ಗಂಟೆಗೆ ತಾಯಿಯ ದರ್ಶನ ನಡೆಯಲಿದ್ದು, ರಾತ್ರಿ 9.30 ಗಂಟೆಗೆ ದೀಪೋತ್ಸವ ಪ್ರಾರಂಭಗೊಳ್ಳಲಿದೆಯೆಂದು ತಿಳಿಸಿದ್ದಾರೆ.

ದೀಪೋತ್ಸವ ದಿನದಂದು ದೇವಾಲಯದಲ್ಲಿ ನೈವೇದ್ಯ ಪ್ರಸಾದ, ಅನ್ನದಾನ, ದೇವಸ್ಥಾನದ ಹೂವಿನ ಅಲಂಕಾರ ಮತ್ತು ವಿದ್ಯುತ್ ದೀಪಾಲಂಕಾರಗಳನ್ನು ಮಾಡಲಿಚ್ಚಿಸುವವರು ಖುದ್ದಾಗಿ ದೇವಾಲಯದ ಆಡಳಿತ ಮಂಡಳಿ ಕಚೇರಿಯಲ್ಲಿ ಧರ್ಮದರ್ಶಿಗಳನ್ನು ಭೇಟಿ ಮಾಡಬಹುದಾಗಿದ್ದು, ಹೆಚ್ಚಿನ ಮಾಹಿತಿಗಳಿಗಾಗಿ ಧರ್ಮದರ್ಶಿಗಳಾದ ಗೋವಿಂದ ಸ್ವಾಮಿ ಅವರನ್ನು ಮೊ. 9480730523, ದೂರವಾಣಿ-08272-224668, 223313 ಯನ್ನು ಸಂಪರ್ಕಿಸಬಹುದು.