ಸೋಮವಾರಪೇಟೆ, ನ. 1: ಇಲ್ಲಿನ ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವತಿಯಿಂದ ತಾ. 3 ರಂದು ಮಧ್ಯಾಹ್ನ 2 ಗಂಟೆಗೆ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ರೇಬಿಸ್ ರೋಗ ಕುರಿತು ಮಾಹಿತಿ ಕಾರ್ಯಾಗಾರ ನಡೆಯಲಿದೆ ಎಂದು ಇಲಾಖೆಯ ಹೆಚ್.ಆರ್. ಗಿರೀಶ್ ತಿಳಿಸಿದ್ದಾರೆ.

ತಾಲೂಕು ಪಂಚಾಯಿತಿ ಪ್ರಬಾರ ಕಾರ್ಯನಿರ್ವಹಣಾಧಿಕಾರಿ ಸುನಿಲ್ ಕುಮಾರ್, ತಹಶೀಲ್ದಾರ್ ಪಿ.ಎಸ್. ಮಹೇಶ್, ಡಿವೈಎಸ್‍ಪಿ ಪಿ.ಕೆ. ಮುರುಳೀಧರ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎಂ.ಎಸ್. ಚಿಣ್ಣಪ್ಪ, ಜಿಲ್ಲಾ ಪಶು ವೈದ್ಯಕೀಯ ಇಲಾಖೆಯ ಉಪನಿರ್ದೇಶಕ ತಮ್ಮಯ್ಯ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ.

ಕಾರ್ಯಾಗಾರದಲ್ಲಿ ಅಧಿಕಾರಿಗಳು ಹಾಗೂ ಸಾರ್ವಜನಿಕರಿಗೆ ಸುಳ್ಯದ ಅರಂತೋಡು ಪಶು ವೈದ್ಯಕೀಯ ಇಲಾಖೆಯ ಡಾ. ನಿತಿನ್ ಪ್ರಭು ಉಪನ್ಯಾಸ ನೀಡಲಿದ್ದಾರೆ ಎಂದು ಗಿರೀಶ್ ತಿಳಿಸಿದ್ದಾರೆ.