ಮಡಿಕೇರಿ, ನ. 1: ಶ್ರೀಕ್ಷೇತ್ರ ಶಬರಿಮಲೆ ಸಂರಕ್ಷಣಾ ಸಮಿತಿ ತಾ. 2ರಂದು (ಇಂದು) ಹಮ್ಮಿಕೊಂಡಿರುವ ಹೋರಾಟಕ್ಕೆ ಕೊಡಗು ಜಿಲ್ಲಾ ಬಜರಂಗದಳ ಬೆಂಬಲ ಘೋಷಿಸಿದೆ. ನಗರದಲ್ಲಿ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ನಡೆಯಲಿರುವ ಹೋರಾಟದಲ್ಲಿ ಬಜರಂಗದಳ ಕಾರ್ಯಕರ್ತರು ಪಾಲ್ಗೊಳ್ಳಲಿರುವದಾಗಿ ಜಿಲ್ಲಾ ಸಂಚಾಲಕ ಕೆ.ಹೆಚ್. ಚೇತನ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.