ಶನಿವಾರಸಂತೆ, ನ. 1: ರಾಷ್ಟ್ರೀಯ ಅರಿವು ಕಾರ್ಯಕ್ರಮದ ಅಂಗವಾಗಿ ಶನಿವಾರಸಂತೆ ಕಾವೇರಿ ಕಾಲೇಜಿನಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಭ್ರಷ್ಟಾಚಾರ ವಿರೋಧಿ ಪ್ರತಿಜ್ಞಾ ವಿಧಿ ಮತ್ತು ಭ್ರಷ್ಟಾಚಾರ ವಿರೋಧಿ ಸಪ್ತಾಹದ ಬಗ್ಗೆ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಶನಿವಾರಸಂತೆ ಪೊಲೀಸ್ ಠಾಣಾಧಿಕಾರಿ ಹೆಚ್.ಎಂ. ಮರಿಸ್ವಾಮಿ ಕಾಲೇಜು ವಿದ್ಯಾರ್ಥಿಗಳಿಗೆ ಭ್ರಷ್ಟಾಚಾರ ವಿರೋಧಿ ಪ್ರತಿಜ್ಞಾ ವಿಧಿಯನ್ನು ಬೋಧಿಸಿ, ಭ್ರಷ್ಟಾಚಾರ ತೊಲಗಿಸುವಲ್ಲಿ ಅನುಸರಿಸಬೇಕಾದ ಕ್ರಮಗಳ ಕುರಿತು ಮಾಹಿತಿ ನೀಡಿದರು.

ಪೊಲೀಸ್ ಸಿಬ್ಬಂದಿಗಳಾದ ಸಂತೋಷ್‍ಕುಮಾರ್, ವಿವೇಕ್, ಪ್ರಾಂಶುಪಾಲ ದೇವರಾಜ್, ಶಿಕ್ಷಕ ಸಮುದಾಯದವರು ಹಾಜರಿದ್ದರು.