ಸೋಮವಾರಪೇಟೆ, ನ. 1: ಜಿಲ್ಲಾ ಮಕ್ಕಳ ಸಹಾಯವಾಣಿ ಕೇಂದ್ರದ ವತಿಯಿಂದ ಸಮೀಪದ ಮಸಗೋಡು ಗ್ರಾಮದ ಅಂಗನವಾಡಿಯಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆ, ಸಹಾಯವಾಣಿಯ ಕಾರ್ಯಕ್ರಮಗಳ ಬಗ್ಗೆ ವಿಶೇಷ ಅರಿವು ಕಾರ್ಯಕ್ರಮ ನಡೆಯಿತು.

ಮಕ್ಕಳ ಸಹಾಯವಾಣಿ ಕೇಂದ್ರದ ಬಿ.ಕೆ. ಕುಮಾರಿ ಮಾತನಾಡಿ, ಮಕ್ಕಳ ಹಕ್ಕುಗಳ ರಕ್ಷಣೆ, ಬಾಲ್ಯವಿವಾಹ ತಡೆ ಕಾಯ್ದೆ ಬಗ್ಗೆ ಮಾಹಿತಿ ಒದಗಿಸಿದರು. ಕಾರ್ಯಕ್ರಮದಲ್ಲಿ ಪೊಲೀಸ್ ಠಾಣೆಯ ಮುಖ್ಯಪೇದೆ ಶಶಿಧರ್, ರಮ್ಯ, ನೇರುಗಳಲೆ ಗ್ರಾ.ಪಂ. ಅಧ್ಯಕ್ಷ ತಿಮ್ಮಯ್ಯ, ಚೈಲ್ಡ್ ಲೈನ್ ಸಿಬ್ಬಂದಿ ಯೋಗೇಶ್, ಅಂಗನವಾಡಿ, ಸ್ತ್ರೀಶಕ್ತಿ, ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.