ಸಿದ್ದಾಪುರ, ನ. 2 : ಪಾಲಿಬೆಟ್ಟ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದಲ್ಲಿ ಲಕ್ಷಾಂತರ ರೂ ಹಗರಣ ನಡೆಸಿದ ಆರೋಪದಡಿಯಲ್ಲಿ ಮಾಜಿ ಕಾರ್ಯನಿರ್ವಾಹಕÀ ಅಧಿಕಾರಿ ಪಿ.ಸಿ ಕೃಷ್ಣ ಹಾಗೂ ಹಗರಣದಲ್ಲಿ ಭಾಗಿಯಾದ ಇತರರ ವಿರುದ್ಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಆರೋಪಿ ಪಿ.ಸಿ ಕೃಷ್ಣ ಪಾಲಿಬೆಟ್ಟ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದಲ್ಲಿ ಕಳೆದ ಮೂವತ್ತು ವರ್ಷಗಳ ಕಾಲ ಕಾರ್ಯನಿರ್ವಾಹಕ ಸಿದ್ದಾಪುರ, ನ. 2 : ಪಾಲಿಬೆಟ್ಟ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದಲ್ಲಿ ಲಕ್ಷಾಂತರ ರೂ ಹಗರಣ ನಡೆಸಿದ ಆರೋಪದಡಿಯಲ್ಲಿ ಮಾಜಿ ಕಾರ್ಯನಿರ್ವಾಹಕÀ ಅಧಿಕಾರಿ ಪಿ.ಸಿ ಕೃಷ್ಣ ಹಾಗೂ ಹಗರಣದಲ್ಲಿ ಭಾಗಿಯಾದ ಇತರರ ವಿರುದ್ಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಆರೋಪಿ ಪಿ.ಸಿ ಕೃಷ್ಣ ಪಾಲಿಬೆಟ್ಟ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದಲ್ಲಿ ಕಳೆದ ಮೂವತ್ತು ವರ್ಷಗಳ ಕಾಲ ಕಾರ್ಯನಿರ್ವಾಹಕ ಮಹಿಳೆಯೋರ್ವಳು ಪತ್ರಿಕಾಗೋಷ್ಠಿಯಲ್ಲಿ ದಾಖಲೆಗಳ ಸಹಿತ ಬಹಿರಂಗ ಪಡಿಸಿ ಕಾರ್ಯನಿರ್ವಾಹಣಾಧಿಕಾರಿ ಸೇರಿ ಕೆಲವರು ತನಗೆ ಬೆದರಿಕೆಯೊಡ್ಡಿರುವದಾಗಿ ಹೇಳಿದ್ದರು.

ಈ ಘಟನೆಯ ಕುರಿತು ಸಮಗ್ರ ತನಿಖೆ ನಡೆಸಿ ಆರೋಪಿಗಳನ್ನು ಪತ್ತೆಹಚ್ಚಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದರು. ಈ ಹಿನ್ನೆಲೆಯಲ್ಲಿ ಆಡಳಿತ ಮಂಡಳಿ ಕಾರ್ಯನಿರ್ವಾಹಕಾಧಿಕಾರಿ ಕೃಷ್ಣ ಅವರಿಗೆ ನೋಟೀಸ್ ಕೂಡ ನೀಡಲಾಗಿತ್ತು. ಇದೀಗ ಲಕ್ಷಾಂತರ ರೂ. ಹಗರಣದ ಆರೋಪ ಹೊತ್ತಿರುವ ಕೃಷ್ಣ ನಿವೃತ್ತಿ ಹೊಂದಿದ್ದು, ಆಡಳಿತ ಮಂಡಳಿ ಹಗರಣ ನಡೆಸಿದ ಕೃಷ್ಣ ಹಾಗೂ ಇತರರ ವಿರುದ್ಧ ಕ್ರಮಕೈಗೊಳ್ಳುವಂತೆ ಸಿದ್ದಾಪುರ ಠಾಣೆಗೆ ದೂರು ನೀಡಿದ್ದು, ಪ್ರಕರಣಕ್ಕೆ ಸಂಬಂಧಿಸಿ ಸಿದ್ದಾಪುರ ಪೊಲೀಸರು ಮೇಲಧಿಕಾರಿಗಳ ಅನುಮತಿ ಮೇರೆಗೆ ದೂರು ದಾಖಲಿಸಿ ಮುಂದಿನ ಕ್ರಮಕೈಗೊಂಡಿದ್ದಾರೆ.

.

.