ಮಡಿಕೇರಿ, ನ. 3: ಕರ್ನಾಟಕ ಸಾಹಿತ್ಯ ಅಕಾಡೆಮಿಯು 2018ರ ಡಿಸೆಂಬರ್, 2ನೇ ವಾರದಲ್ಲಿ ರಾಜ್ಯಮಟ್ಟದ ಐದು ದಿನಗಳ ವಸತಿ ಸಹಿತ ‘ಕಾವ್ಯ’ ಕಮ್ಮಟವನ್ನು ರಾಮನಗರ ಜಿಲ್ಲೆಯ ಕೆರೆಮೇಗಳದೊಡ್ಡಿಯ ಮುದ್ದುಶ್ರೀ ದಿಬ್ಬದಲ್ಲಿ ಯೋಜಿಸಲು ಉದ್ದೇಶಿಸಿದ್ದು, ಈಗಾಗಲೇ ಕಾವ್ಯ ರಚನೆಯಲ್ಲಿ ತೊಡಗಿರುವ ಮತ್ತು ಆಸಕ್ತಿಯಿರುವ ರಾಜ್ಯದ ಎಲ್ಲಾ ಭಾಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ನವೆಂಬರ್, 15 ಕೊನೆ ದಿನವಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಕರ್ನಾಟಕ ಸಾಹಿತ್ಯ ಅಕಾಡೆಮಿಯ ವೆಬ್‍ಸೈಟ್ hಣಣಠಿ://ಞಚಿಡಿಟಿಚಿಣಚಿಞಚಿsಚಿhiಣhಥಿಚಿಚಿಛಿಚಿಜemಥಿ.oಡಿg ಇಂದ ಅರ್ಜಿ ನಮೂನೆ ಹಾಗೂ ವಿವರಗಳನ್ನು ಪಡೆದುಕೊಳ್ಳಬಹುದು ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಎನ್.ಕರಿಯಪ್ಪ ಅವರು ತಿಳಿಸಿದ್ದಾರೆ.