ಮಡಿಕೇರಿ, ನ. 3: ವೀರಾಜಪೇಟೆ ಬಾಲಭವನ ಸಮಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಸಮಗ್ರ ಶಿಶು ಅಭಿವೃದ್ದಿ ಯೋಜನೆ ಇವರ ಸಂಯುಕ್ತ ಆಶ್ರಯದಲ್ಲಿ ಪೊನ್ನಂಪೇಟೆ ಜಿ.ಎಂ.ಪಿ.ಶಾಲೆ ಸಭಾಂಗಣದಲ್ಲಿ ತಾ. 7 ರಂದು ಬೆಳಗ್ಗೆ 10 ಗಂಟೆಗೆ ಕಲಾಶ್ರೀ ಶಿಬಿರ ನಡೆಯಲಿದೆ.

ತಾಲೂಕು ಮಟ್ಟದ ಶಿಬಿರದಲ್ಲಿ 4 ಚಟುವಟಿಕೆಗಳಲ್ಲಿ (ಸೃಜನಾತ್ಮಕ ಕಲೆ, ಸೃಜನಾತ್ಮಕ ಬರವಣಿಗೆ, ಸೃಜನಾತ್ಮಕ ಪ್ರದರ್ಶನ ಕಲೆ, ವಿಜ್ಞಾನದಲ್ಲಿ ನೂತನ ಆವಿಷ್ಕಾರ) ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಸ್ಪರ್ಧೆಯಲ್ಲಿ ಭಾಗವಹಿಸುವ 9 ರಿಂದ 16 ವರ್ಷದ ಒಳಗಿನ ಮಕ್ಕಳು ತಾ. 7 ರಂದು ಬೆಳಗ್ಗೆ 9.30 ಗಂಟೆಗೆ ಹೆಸರು ನೋಂದಾಯಿಸಿಕೊಳ್ಳುವದು. ಈಗಾಗಲೇ ಕಲಾಶ್ರೀ ಪ್ರಶಸ್ತಿಗೆ ಭಾಜನರಾದವರು ಮತ್ತೆ ಭಾಗವಹಿಸುವಂತಿಲ್ಲ. ಹಾಗೂ ತಾಲೂಕು ಮಟ್ಟದಲ್ಲಿ ಆಯ್ಕೆಯಾದ ಮಕ್ಕಳು ತಾ. 9 ರಂದು ಮಡಿಕೇರಿ ಶಿಶು ಕಲ್ಯಾಣ ಸಂಸ್ಥೆಯಲ್ಲಿ ನಡೆಯುವ ಕಲಾಶ್ರೀ ಶಿಬಿರದಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ದಿ ಯೋಜನಾಧಿಕಾರಿಯವರು ಶಿಶು ಅಭಿವೃದ್ದಿ ಯೋಜನೆ ಗ್ರಾ.ಪಂ. ಆವರಣ ಪೊನ್ನಂಪೇಟೆ ದೂರವಾಣಿ ಸಂಖ್ಯೆ 08274-249788 ಆವರನ್ನು ಸಂಪರ್ಕಿಸಬಹುದಾಗಿದೆ.