ವೀರಾಜಪೇಟೆ, ನ. 25: ವೀರಾಜಪೇಟೆಯಲ್ಲಿ ತಾ. 28 ರಂದು ಮೈಸೂರಿನ ನಾರಾಯಣ ಆಸ್ಪತ್ರೆಯ ವತಿಯಿಂದ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸೈನಿಕರ ಸಹಕಾರ ಸಂಘದ ಅಧ್ಯಕ್ಷ ಚೇಂದ್ರಿಮಾಡ ಗಣೇಶ್ ನಂಜಪ್ಪ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ನಂಜಪ್ಪ ಅವರು ಸಂಘದ ನೇತೃತ್ವದಲ್ಲಿ ಇಲ್ಲಿನ ಪುರಭವನದಲ್ಲಿ ನಡೆಯುವ ಆರೋಗ್ಯ ತಪಾಸಣಾ ಶಿಬಿರದಲ್ಲಿ ಬೆಳಿಗ್ಗೆ 10 ರಿಂದ ಅಪರಾಹ್ನ 1ಗಂಟೆಯವರೆಗೆ ಮಾಜಿ ಸೈನಿಕರು, ಅವರ ಕುಟುಂಬದವರು ಹಾಗೂ ಅವಲಂಭಿತರಿಗೆ ಆರೋಗ್ಯ ತಪಾಸಣೆ ನಡೆಯಲಿದೆ. ಅಪರಾಹ್ನ 2ಗಂಟೆಯಿಂದ 5ಗಂಟೆಯವರೆಗೆ ಸಾರ್ವಜನಿಕರಿಗಾಗಿ ಆರೋಗ್ಯ ತಪಾಸಣಾ ನಡೆಯಲಿದೆ ಎಂದರು.

ಆರೋಗ್ಯ ಶಿಬಿರದಲ್ಲಿ ನುರಿತ ತಜ್ಞ ವೈದ್ಯರುಗಳು ಭಾಗವಹಿಸಲಿದ್ದು, ರಕ್ತ ಪರೀಕ್ಷೆ, ರಕ್ತದ ಒತ್ತಡ, ಇ.ಸಿ.ಜಿ. ಹೃದಯಪರೀಕ್ಷೆ , ಕ್ಯಾನ್ಸರ್, ವಿಶೇಷವಾಗಿ ಮಹಿಳೆಯರಿಗೂ ಆರೋಗ್ಯ ತಪಾಸಣೆ ನಡೆಯಲಿದೆ ಎಂದು ನಂಜಪ್ಪ ತಿಳಿಸಿದರು.

ಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಚಪ್ಪಂಡ ಹರೀಶ್ ಉತ್ತಯ್ಯ, ಪಿ.ರಮೇಶ್ ಕರುಂಬಯ್ಯ, ನಿರ್ದೇಶಕರಾದ ಎಂ.ರಾಜಾ ಸುರೇಶ್ ಉಪಸ್ಥಿತರಿದ್ದರು.