*ಗೋಣಿಕೊಪ್ಪಲು, ನ. 26: ವೀರಾಜಪೇಟೆಯಲ್ಲಿ ಈಗಾಗಲೆ ನಿರ್ಮಾಣಗೊಂಡಿರುವ ಮಿನಿ ವಿಧಾನ ಸೌಧದ 2 ನೇ ಅಂತಸ್ತಿನ ಕಟ್ಟಡ ನಿರ್ಮಾಣಕ್ಕೆ ರಾಜ್ಯ ಸರ್ಕಾರ 2018-19ನೇ ಸಾಲಿನ ಹಣಕಾಸು ಯೋಜನೆಯಲ್ಲಿ ರೂ 6ಕೋಟಿ ಅನುದಾನವನ್ನು ಬಿಡುಗಡೆಮಾಡಿದೆ ಎಂದು ಶಾಸಕ ಕೆ.ಜಿ. ಬೋಪಯ್ಯ ತಿಳಿಸಿದ್ದಾರೆ. ಈಗಾಗಲೆ ರೂ 2 ಕೋಟಿ ವೆಚ್ಚದಲ್ಲಿ ಮೊದಲ ಅಂತಸ್ತಿನ ಕಟ್ಟಡ ಪೂರ್ಣಗೊಂಡು ಕಚೇರಿಗಳು ಕಾರ್ಯನಿರ್ವಹಿಸುತ್ತಿವೆ. ಆದರೆ ಮಳೆಗಾಲದಲ್ಲಿ ನೀರು ಒಳನುಗ್ಗಿ ಕಚೇರಿ ಕಾರ್ಯ ನಿರ್ವಹಣೆಗೆ ಅಡ್ಡಿಯಾಗುತ್ತಿದೆ. ಈ ಕಾರಣಕ್ಕೆ 2 ಅಂತಸ್ತು ನಿರ್ಮಿಸಲು ಬೇಕಾದ ಅನುದಾನ ನೀಡಬೇಕು ಎಂದು ಒತ್ತಾಯಿಸಲಾಗಿತ್ತು. ಇದನ್ನು ಪರಿಗಣಿಸಿದ ಸರ್ಕಾರ ಇದೀಗ ಅಗತ್ಯವಿರುವ ಹಣವನ್ನು ಮಂಜೂರು ಮಾಡಿ ಹಣಕಾಸು ಇಲಾಖೆ ಆದೇಶ ಹೊರಡಿಸಿದೆ ಎಂದು ಬೋಪಯ್ಯ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.