ಶನಿವಾರಸಂತೆ, ನ.26: ದುಂಡಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಜೂರು ಗ್ರಾಮದಲ್ಲಿ ಸೋಮವಾರ ಹಗಲು ವೇಳೆಯಲ್ಲಿ ಮನೆಯೊಡತಿ ಕೆ.ಎ. ಆಶಾ ಎಂಬಾಕೆ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಮನೆಯ ಸ್ನಾನದ ರೂಮಿನ ಬಾಗಿಲು ಮುರಿದು ಒಳ ನುಗ್ಗಿದ್ದ ಕಳ್ಳರು ಗಾಡ್ರೇಜ್ ಬೀಗ ಮುರಿದು ಅದರೊಳಗಿದ್ದ ನಗದು ಹಣ 70 ಸಾವಿರ ನಗದು ಹಾಗೂ ಚಿನ್ನಾಭರಣ ಸೇರಿ ಒಟ್ಟು ರೂ. 1.20 ಲಕ್ಷದ ಮಾಲನ್ನು ಕಳವು ಮಾಡಿದ್ದು, ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಮಡಿಕೇರಿಯ ಶ್ವಾನದಳ, ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲಿಸಿದರು.