ಗುಡ್ಡೆಹೊಸೂರು, ನ. 26: ಇಲ್ಲಿನ ಸರಕಾರಿ ಪ್ರಾಥಮಿಕ ಶಾಲೆಯ ಎಲ್ಲಾ ಮಕ್ಕಳಿಗೂ ಕುಶಾಲನಗರದ ಇನ್ನರ್ ವ್ಹೀಲ್ ಸಂಸ್ಥೆಯ ವತಿಯಿಂದ ಗುರುತಿನ ಚೀಟಿಯನ್ನು ವಿತರಿಸಲಾಯಿತು. ಸಹ ಶಿಕ್ಷಕಿ ಯಶುಮತಿ, ಮುಖ್ಯಶಿಕ್ಷಕ ಸಣ್ಣಸ್ವಾಮಿ ಮತ್ತು ತಂಡದವರು ಮಕ್ಕಳಿಗೆ ಗುರುತಿನ ಚೀಟಿಯನ್ನು ವಿತರಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ. ಅಧ್ಯಕ್ಷ ಬಿ.ಎಸ್. ದಿನೇಶ್ ವಹಿಸಿದ್ದರು. ವೇದಿಕೆಯಲ್ಲಿ ಬಿ.ಎಸ್. ಧನಪಾಲ್, ಬಿ.ಎನ್. ಕಾಶಿ, ಇನ್ನರ್ ವ್ಹೀಲ್ ಸಂಸ್ಥೆಯ ಅಧ್ಯಕ್ಷೆ ಸುನಿತಾ, ಸಂಧ್ಯಾ ಮತ್ತು ಸದಸ್ಯರಾದ ಪೂರ್ಣಿಮ, ಶಾಲಿನಿ, ತೇಜಸ್ವೀನಿ, ಸ್ಮಿತಾ ಮತ್ತು ಎಸ್.ಡಿ.ಎಂ.ಸಿ. ಸದಸ್ಯರಾದ ಪಾಪಣ್ಣಿ, ವಿಜಯ, ಪರಮೇಶ ಹಾಜರಿದ್ದರು.