ಮಡಿಕೇರಿ, ನ. 27: ಕೃಷಿ ಇಲಾಖೆ ವತಿಯಿಂದ ತಾ. 29 ರಂದು ಬೆಳಿಗ್ಗೆ 10.30 ಗಂಟೆಗೆ ಸಂಪಾಜೆ ಹೋಬಳಿಯ ಪೆರಾಜೆ ಗ್ರಾಮ ಪಂಚಾಯತಿ ಅನ್ನಪೂರ್ಣೇಶ್ವರಿ ಕಲಾಮಂದಿರ ಆವರಣದಲ್ಲಿ ‘ಕೃಷಿ ಅಭಿಯಾನ’ ಕಾರ್ಯಕ್ರಮ ನಡೆಯಲಿದೆ. ಕೃಷಿ ಮತ್ತು ಕೃಷಿ ಸಂಬಂಧಿತ ವಿವಿಧ ಇಲಾಖೆಗಳ ವಸ್ತು ಪ್ರದರ್ಶನ, ರೈತರು-ವಿಜ್ಞಾನಿಗಳ ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿದೆ.