ಮಡಿಕೇರಿ, ನ. 27: ಸುನ್ನಿ ಯುವಜನ ಸಂಘ ಕೊಡಗು ಜಿಲ್ಲಾ ಸಮಿತಿ ವತಿಯಿಂದ ಪ್ರವಾದಿ ಮುಹಮ್ಮದ್ ಪೈಗಂಬರ 1493ನೇ ಹುಬ್ಬುರಸೂಲ್ ಕಾನ್ಫರೆನ್ಸ್ ನಗರದ ಕಾವೇರಿ ಹಾಲ್‍ನಲ್ಲಿ ನಡೆಯಿತು.

ಕೊಡಗು ಜಿಲ್ಲಾ ನಾಯಿಬ್ ಖಾಜಿû ಮಹ್ಮೂದ್ ಉಸ್ತಾದ್ ಎಡಪಾಲ ದುಆ ನೆರವೇರಿಸಿದರು.

ಅಧ್ಯಕ್ಷತೆಯನ್ನು ಎಸ್ .ವೈ .ಎಸ್ ಕೊಡಗು ಜಿಲ್ಲಾ ಅಧ್ಯಕ್ಷ ಹಫಿûೀಳ್ ಸಅದಿ ವಹಿಸಿದ್ದರು.

ಕಾರ್ಯಕ್ರಮವನ್ನು ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಇಸ್ಮಾಯಿಲ್ ಸಖಾಫಿû ಕೊಂಡಂಗೇರಿ ಉದ್ಘಾಟಿಸಿದರು. ಮುಖ್ಯ ಭಾಷಣವನ್ನು ಅಬುಬಕರ್ ಸಿದ್ದೀಕ್ ಮೌಂಟುಗೋಳಿ ಮಾಡಿದರು.

ಕಾರ್ಯಕ್ರಮದಲ್ಲಿ ಡಾಕ್ಟರೇಟ್ ಪದವಿ ಪಡೆದ ಎಸ್. ವೈ. ಎಸ್ ಕರ್ನಾಟಕ ರಾಜ್ಯ ಕಾರ್ಯದರ್ಶಿ ಡಾ. ಅಬ್ದುಲ್ ರಶೀದ್ ಝೈನಿ ಕಾಮಿಲ್ ಸಖಾಫಿ ಕಕ್ಕಿಂಜೆ ಹಾಗೂ ಜಿ.ಪಂ. ಸದಸ್ಯ ದಾನಿಗಳಾದ ಲತೀಫ್ ಸುಂಟಿಕೊಪ್ಪ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕೇರಳ ಮುಸ್ಲಿಂ ಜಮಾಅತ್ ಪ್ರಧಾನ ಕಾರ್ಯದರ್ಶಿ ಮಹದಿನ್ ಚೇರ್ಮಾನ್ ಸಯ್ಯದ್ ಇಬ್ರಾಹಿಂ ಖಲೀಲ್ ಬುಖಾರಿ ತಂಙಳ್ ಕಡಲುಂಡಿ, ಸಯ್ಯದ್ ಶಿಹಾಬುದ್ದೀನ್ ತಂಙಳ್ ಕಿಲ್ಲೂರ್ ಆಗಮಿಸಿದ್ದರು.

ವೇದಿಕೆಯಲ್ಲಿ ಎಸ್.ವೈ.ಎಸ್ ಕಾರ್ಯದರ್ಶಿ ಮುಸ್ತಫಾ ಸಖಾಫಿ, ಎಸ್.ವೈ.ಎಸ್ ಅಧ್ಯಕ್ಷರಾದ ಕರೀಂ ಫಾಳಿಲಿ, ಎಸ್ಸೆಸ್ಸೆಫ್ ಎಸ್.ವೈ.ಎಸ್. ನಾಯಕರು, ಕಾರ್ಯಕರ್ತರು ಹಾಜರಿದ್ದರು. -ಇಸ್ಮಾಯಿಲ್