ಮಡಿಕೇರಿ, ನ. 27: ಪ್ರಕೃತಿ ವಿಕೋಪದಿಂದ ಮನೆಗೆ ಹಾನಿಯಾಗಿರುವ ಮಕ್ಕಂದೂರು ಗ್ರಾ.ಪಂ. ವ್ಯಾಪ್ತಿಯ ಸಂತ್ರಸ್ತರಿಗೆ ಕೆನರಾ ಬ್ಯಾಂಕ್ ನಿವೃತ್ತ ಅಧಿಕಾರಿಗಳ ಸಂಘದ ವತಿಯಿಂದ ನೆರವು ನೀಡಲಾಯಿತು. ಸಂಘದ ವತಿಯಿಂದ ಸಂಗ್ರಹಿಸಲಾದ ಹಣವನ್ನು ಮಕ್ಕಂದೂರು ಕೆನರಾ ಬ್ಯಾಂಕ್ ಶಾಖೆಯಲ್ಲಿ 21 ಮಂದಿ ಸಂತ್ರಸ್ತರಿಗೆ ವಿತರಿಸಲಾಯಿತು. ಸಂಘದ ಪದಾಧಿಕಾರಿಗಳು, ಬ್ಯಾಂಕ್‍ನ ಅಧಿಕಾರಿಗಳು, ಸಿಬ್ಬಂದಿಗಳು ಈ ಸಂದರ್ಭ ಹಾಜರಿದ್ದರು.