ಮಡಿಕೇರಿ, ನ. 28: ಕೊಡಗು ಜಿಲ್ಲಾ ಕೇಂದ್ರ ಸಹಕಾರ ಸಗಟು ಮಾರಾಟ ಸ್ಟೋರ್ಸ್ (ಜನತಾ ಬಜಾರ್) ಮಡಿಕೇರಿ ಇದರ ಆಡಳಿತ ಮಂಡಳಿಯ ಮುಂದಿನ 5 ವರ್ಷಗಳ ಅವಧಿಗೆ ನಿರ್ದೇಶಕರ ಸ್ಥಾನಕ್ಕೆ ಸ್ಪರ್ಧಿಸಿ ನಾಮಪತ್ರ ಸಲ್ಲಿಸಿದ್ದ ಎಲ್ಲಾ ಕ್ಷೇತ್ರಗಳ ಅಭ್ಯರ್ಥಿಗಳು ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಸಂಘದ ರಿಟರ್ನಿಂಗ್ ಅಧಿಕಾರಿ ಎಂ.ಈ. ಮೋಹನ್ ಘೋಷಣೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ತಾ. 29 ರಂದು (ಇಂದು) ನಡೆಯಬೇಕಾಗಿದ್ದ ಆಡಳಿತ ಮಂಡಳಿಯ ಚುನಾವಣಾ ಪ್ರಕ್ರಿಯೆಯನ್ನು ರದ್ದುಪಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.