ಸಿದ್ದಾಪುರ, ನ. 28: ಸಿದ್ದಾಪುರ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಗುಹ್ಯ ಗ್ರಾಮದ ಕೂಡುಗದ್ದೆ ರಸ್ತೆ ಹಾಗೂ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಬೇಕೆಂದು ಒತ್ತಾಯಿಸಿ ಡಿ. 3 ರಂದು ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವದು ಎಂದು ಸಿ.ಪಿ.ಐ.ಎಂ. ಪಕ್ಷದ ಮುಖಂಡ ಅನಿಲ್ ಕುಟ್ಟಪ್ಪನ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಗುಹ್ಯ ಗ್ರಾಮದ ಕೂಡುಗದ್ದೆ ರಸ್ತೆ ಹಾಗೂ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸುವಲ್ಲಿ ಆಡಳಿತ ಮಂಡಳಿಯು ನಿರ್ಲಕ್ಷ್ಯ ವಹಿಸುತ್ತಿದೆ. ಗುಹ್ಯ ಗ್ರಾಮದ ಕೂಡುಗದ್ದೆಯ ಹಲವಾರು ಬಡ ಕುಟುಂಬಗಳ ಮನೆಗಳು ಪ್ರವಾಹಕ್ಕೆ ಸಿಲುಕಿ ಹಾನಿ ಯಾಗಿದ್ದು, ವಾಸಿಸಲು ಯೋಗ್ಯವಿಲ್ಲ ದಂತಾಗಿದೆ. ಈ ಕುಟುಂಬಗಳಿಗೆ ಶಾಶ್ವತ ಸೂರು ಒದಗಿಸಿ ಕೊಡಬೇಕೆಂದು ಒತ್ತಾಯಿಸಿದರು. ಕೂಡುಗದ್ದೆ ರಸ್ತೆ ತೀವ್ರವಾಗಿ ಹದಗೆಟ್ಟಿದ್ದು, ಇದನ್ನು ದುರಸ್ತಿ ಪಡಿಸಿಕೊಡುವಂತೆ ಹಲವಾರು ಬಾರಿ ಪಂಚಾಯಿತಿಗೆ ಮನವಿ ಸಲ್ಲಿಸಿದ್ದರೂ ಸ್ಪಂದಿಸುತ್ತಿಲ್ಲ ಎಂದು ದೂರಿದರು. ಈ ಹಿನ್ನೆಲೆ ಡಿ. 3 ರಂದು ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವದು ಎಂದರು.

ಗೋಷ್ಠಿಯಲ್ಲಿ ಸಿ.ಪಿ.ಐ.ಎಂ. ಪಕ್ಷದ ಪದಾಧಿಕಾರಿಗಳಾದ ಮುಸ್ತ್ತಾಫ, ವಾಸು, ಮೊೈದು ಹಾಜರಿದ್ದರು.