ಸಿದ್ದಾಪುರ, ನ. 28: ಕನ್ನಡ ಸಾಹಿತ್ಯ ಪರಿಷತ್ತು ಅಮ್ಮತ್ತಿ ಹೋಬಳಿ ಘಟಕ ಹಾಗೂ ಶ್ರೀ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಗಳು ಸಿದ್ದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ತಾ. 30 ರಂದು ನುಡಿಹಬ್ಬ ನಡೆಯಲಿದೆ.

ಸಿದ್ದಾಪುರದ ಶ್ರೀ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದ್ದು, 18 ಶಾಲೆಯ ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ. ವಿದ್ಯಾರ್ಥಿಗಳಿಗೆ ಕನ್ನಡ ಸಾಹಿತ್ಯದ ಬಗ್ಗೆ ಪ್ರಬಂಧ, ರಸಪ್ರಶ್ನೆ ಹಾಗೂ ಜಾನಪದ ಹಾಡುಗಳ ಸ್ಪರ್ಧೆಗಳು ನಡೆಯಲಿದ್ದು, ಸಿದ್ದಾಪುರ ಸೇರಿದಂತೆ ಸುತ್ತಮುತ್ತಲ ಭಾಗದ ಪ್ರೌಢಶಾಲೆಯ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.

ಮದ್ಯಾಹ್ನದ ಬಳಿಕ ಸಮಾರೋಪ ಸಮಾರಂಭ ನಡೆಯಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ.ಸಾ.ಪ. ಅಮ್ಮತ್ತಿ ಹೋಬಳಿ ಘಟಕದ ಅಧ್ಯಕ್ಷ ಎಂ.ಎಸ್. ವೆಂಕಟೇಶ್ ವಹಿಸಲಿದ್ದಾರೆ. ಶ್ರೀ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ನಿರ್ಮಾಲಾನಂದನಾಥ ಸ್ವಾಮೀಜಿ, ಕ.ಸಾ.ಪ. ಜಿಲ್ಲಾಧ್ಯಕ್ಷ ಲೋಕೇಶ್ ಸಾಗರ್, ತಾಲೂಕು ಅಧ್ಯಕ್ಷ ಮಧೊಶ್ ಪೂವಯ್ಯ, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಸಿದ್ದಾಪುರ ಠಾಣಾಧಿಕಾರಿ ದಯಾನಂದ, ಪಿ.ಡಿ.ಓ. ವಿಶ್ವನಾಥ್ ಸೇರಿದಂತೆ ಇನ್ನಿತರರು ಭಾಗವಹಿಸಲಿದ್ದಾರೆ.