ಮಡಿಕೇರಿ, ನ. 29: ಕೆನರಾ ಬ್ಯಾಂಕ್‍ನ 113ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಮಕ್ಕಂದೂರು ಶಾಖಾ ಕಚೇರಿಯಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಗ್ರಾ.ಪಂ. ಅಧ್ಯಕ್ಷೆ ಲಕ್ಕಪ್ಪನ ಕಾವೇರಮ್ಮ ಹರೀಶ್, ಸದಸ್ಯ ಅಣ್ಣೆಚ್ಚಿರ ಸತೀಶ್ ಸೋಮಣ್ಣ, ಬ್ಯಾಂಕ್ ವ್ಯವಸ್ಥಾಪಕಿ ಲೀಲಾವತಿ ಹಾಗೂ ಸಿಬ್ಬಂದಿಗಳಿದ್ದರು.

ಈ ಸಂದರ್ಭ ವಿದ್ಯಾಜ್ಯೋತಿ ಯೋಜನೆಯಡಿ ಸರಕಾರಿ ಶಾಲೆಗಳಿಗೆ ನೀಡಲಾಗುವ ವಿದ್ಯಾರ್ಥಿ ವೇತನವನ್ನು 6 ಮಂದಿ ವಿದ್ಯಾರ್ಥಿಗಳಿಗೆ ನೀಡಲಾಯಿತು. ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ರೂ. 2500, ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ರೂ. 5000 ದಂತೆ ವಿತರಿಸಲಾಯಿತು.